ಮಹಾತ್ಮಾ ಗಾಂಧಿ ಪ್ರೌಢ ಶಾಲೆ ಸಾಹೇಬರಕಟ್ಟೆ ಇದರ 2022-23ನೆಯ ಸಾಲಿನ ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಮಹಾತ್ಮಾ ಗಾಂಧಿ ಪ್ರೌಢ ಶಾಲೆ ಸಾಹೇಬರಕಟ್ಟೆ ಇದರ 2022-23ನೆಯ ಸಾಲಿನ ವಿದ್ಯಾರ್ಥಿ ಸಂಸತ್ ಉದ್ಘಾಟನೆ ಹಾಗೂ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಇಂದು ಜರಗಿತು.

ಸಮಾರಭವನ್ನು ದೀಪ ಬೆಳಗಿಸುವುದರ ಮೂಲಕ ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತಾ ಪುರುಷೋತ್ತಮ್ ಉದ್ಘಾಟಿಸಿದರು. ಈ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ದೀಪದಂತೆ ಬೆಳಗಿ ಎಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು. ದಾನಿಗಳಾದ ಶ್ರೀ ರವಿಶಂಕರ್ ಭಟ್ ಶಿರಿಯಾರ ನೀಡಿದ ನೋಟ್ ಪುಸ್ತಕಗಳನ್ನು ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳಿಗೂ ವಿತರಿಸಿ ಶುಭ ಹಾರೈಸಿದರು ಅಭ್ಯಾಗತರಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ರವೀಂದ್ರನಾಥ್ ಶೆಟ್ಟಿ ಮಾತನಾಡಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇಂದಿನ ಶಿಕ್ಷಣ ಪದ್ಧತಿ ಪೂರಕವಾಗಿದ್ದು ಪಠ್ಯ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದು ತಿಳಿಸಿದರು.

ವಿದ್ಯಾರ್ಥಿ ಸಂಸತ್ ನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಮುಖ್ಯ ಶಿಕ್ಷಕ ಸತೀಶ್ ನಾಯ್ಕ್ ಬೋಧಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಕೆ ಪ್ರಸಾದ್ ಶೆಟ್ಟಿ ವಹಿಸಿದ್ದರು. ಮುಖ್ಯ ಶಿಕ್ಷಕ ಸತೀಶ್ ನಾಯ್ಕ್ ಸ್ವಾಗತಿಸಿ ಶಿಕ್ಷಕ ಶಿರಿಯಾರ ಗಣೇಶ್ ನಾಯಕ್ ವಂದಿಸಿದರು. ಸಹ ಶಿಕ್ಷಕಿ ಯಶೋದಾ ಕಾರ್ಯಕ್ರಮ ನಿರ್ವಹಿಸಿದರು.

 
 
 
 
 
 
 
 
 
 
 

Leave a Reply