ನವದೆಹಲಿ: ತೀವ್ರ ಬೆನ್ನು ನೋವು ಹಾಗೂ ಕಾಲು ನೋವಿನಿಂದ ಬಳಲುತ್ತಿರುವ ಸಂಸದ, ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ.
ಹೆಗಡೆ ಅವರು ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದರು. ಇದೇ ಕಾರಣದಿಂದಾಗಿ ಕಳೆದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿಯ ಬಯಕೆ ವ್ಯಕ್ತಪಡಿಸಿದ್ದರು.
ಇತ್ತೀಚೆಗೆ ಕೆಲವು ತಿಂಗಳಿಂದ ನೋವು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ತಜ್ಞ ವೈದ್ಯರು ತಕ್ಷಣವೇ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದರು.
ಇದೀಗ ಶಸ್ತ್ರ ಚಿಕಿತ್ಸೆ ನಡೆದಿದ್ದು ಸಂಸದರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ದೀರ್ಘಾವಧಿಯ ವಿಶ್ರಾಂತಿ ಪಡೆಯುಲು ಸೂಚಿಸಿರುವ ಹಿನ್ನೆಲೆಯಲ್ಲಿ ಪೂರ್ಣವಾಗಿ ಗುಣಮುಖ ರಾಗುವವರೆಗೆ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ತಿಳಿದು ಬಂದಿದೆ.
.