ಮಾಜಿ ಸಚಿವ ಯು.ಟಿ. ಖಾದರ್ ಹತ್ಯೆಗೆ ಸಂಚು?

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ಯು.ಟಿ. ಖಾದರ್ ಹತ್ಯೆಗೆ ಪ್ರಯತ್ನವೊಂದು ನಡೆದ ಬಗ್ಗೆ ವರದಿಯಾಗಿದೆ. ದೇರಳಕಟ್ಟೆಯಲ್ಲಿ ಖಾಸಗಿ ಕಾರ್ಯಕ್ರಮವೊಂದನ್ನು ಮುಗಿಸಿ ಬೆಂಗಳೂರಿಗೆ‌ ತೆರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ಹೊಂಚು ಹಾಕಿ ನಿಂತಿದ್ದ ಅಪರಿಚಿತ ವ್ಯಕ್ತಿ‌ KA 19 EN 6055 ನಂಬ್ರದ ಬೈಕಿನಲ್ಲಿ  ಅನುಮಾನಾಸ್ಪದ ರೀತಿಯಲ್ಲಿ ಶಾಸಕರ  ಕಾರನ್ನೇ ಹಿಂಬಾಲಿಸಿಕೊಂಡು ಬಂದಿದ್ದ. ದೇರಳಕಟ್ಟೆಯಿಂದ ವಿಮಾನ ನಿಲ್ದಾಣಕ್ಕೆ ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು.
ಅನುಮಾನಾಸ್ಪದವಾಗಿ ಹಿಂಬಾಲಿಸುತ್ತಿದ್ದ ಬೈಕಿನ ಬಗ್ಗೆ ಅರಿತ ಶಾಸಕರ ಕಾವಲು ಪಡೆಯ ಮುಖ್ಯಸ್ಥ ಸುಧೀರ್  ರವರು ಕದ್ರಿ ಟ್ರಾಫೀಕ್ ಪೋಲಿಸ್ ಠಾಣೆಗೆ ಮಾಹಿತಿಯನ್ನು ನೀಡಿದರು.

ಪೋಲಿಸರು ನಂತೂರು ಬಳಿ ಅನುಮಾನಸ್ಪದ ವ್ಯಕ್ತಿಯನ್ನು ಬಂಧಿಸಲು ಪ್ರಯತ್ನಿಸಿದಾಗ ವ್ಯಕ್ತಿ ಪರಾರಿಯಾಗಿದ್ದು ಈ ಬಗ್ಗೆ ಕದ್ರಿಠಾಣಾ ವ್ಯಾಪ್ತಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ಮಾಜಿ ಸಚಿವರಿಗೆ ಹೆಚ್ಚಿನ ಭದ್ರತೆಯನ್ನೂ ನೀಡಲಾಗಿದೆ.

 
 
 
 
 
 
 
 
 
 
 

Leave a Reply