ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಾರ್ಷಿಕ ಮಹಾಸಭೆ

ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಾರ್ಷಿಕ ಮಹಾಸಭೆ ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಉಡುಪಿ ಜಿಲ್ಲೆಯ ಸಂಗೊಳ್ಳಿ ರಾಯಣ್ಣ ಕೇಂದ್ರ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಅವರು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.
ಗೌರವ ಮಾರ್ಗದರ್ಶಕರಾಗಿ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀ ಪುತ್ತಿಗೆ ಮಠ, ಗೌರವಾದ್ಯಕ್ಷರಾಗಿ ಶ್ರೀ ಜನಾರ್ದನ ಕೊಡವೂರು ಮತ್ತು ಶ್ರೀ ವಿಜಯ್ ಕೊಡವೂರು, ಗೌರವ ಸಲಹೆಗಾರರಾಗಿ ಶ್ರೀ ಕೃಷ್ಣ ಶೆಟ್ಟಿಬೆಟ್ಟು, ಮತ್ತು ಸುಭಾಷಿತ ಕುಮಾರ್, ಕಾರ್ಯಾಧ್ಯಕ್ಷರಾಗಿ ಶ್ರೀ ಕುಮಾರ್ ಪ್ರಸಾದ್, ಉಪಾಧ್ಯಕ್ಷರಾಗಿ ಶ್ರೀ ಲಕ್ಷ್ಮಣ್ ಕೊಲ್ಕಾರ್ ಮತ್ತು ಶ್ರೀ ಈರಪ್ಪ ಗೌಂಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಮಹೇಶ್ ಗುಂಡಿಬೈಲ್ ಮತ್ತು ಶ್ರೀ ವಿಠ್ಠಲ್, ಖಜಾಂಚಿಯಾಗಿ ಶ್ರೀ ಪಂಪನಗೌಡ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀ ಬಸವರಾಜ್ ಐಹೊಳೆ,ಮತ್ತು ಶ್ರೀ ಅಂಬರೀಷ್,
ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಶ್ರೀ ಆನಂದ್ ಯಂಕಂಚಿ, ಸಂಘಟನಾ ಸಲಹೆಗಾರರಾಗಿ ಶ್ರೀ ರಘುರಾಮ್ ಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು.  ಆಗಸ್ಟ್ 15 ರ ಸಂಗೊಳ್ಳಿ ರಾಯಣ್ಣ ಜಯಂತಿಯ ಕಾರ್ಯಕ್ರಮದ ಕುರಿತು ಚರ್ಚಿಸಿ, ಆಗಸ್ಟ್ 20 ರಂದು ಕುಂಭ ಮೇಳದೊಂದಿಗೆ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಯಿತು.
 
 
 
 
 
 
 
 
 
 
 

Leave a Reply