ಸಂಜೀವಿನಿ ಉತ್ಪನ್ನಗಳ ಮಳಿಗೆ ಉದ್ಘಾಟನೆ

ಸಂಜೀವಿನಿಯಂತಹ ಉತ್ಪನ್ನಗಳ ಮಳಿಗೆ ಜಿಲ್ಲೆಯಲ್ಲಿ ನಿರ್ಮಾಣವಾಗಲಿ—ಸಂಜೀವಿನಿ ಉತ್ಪನ್ನದ ಮಾರಾಟ ಮಳಿಗೆ ಉದ್ಘಾಟಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಧಿಕಾರಿ ನವೀನ್ ಭಟ್
ಜಿಲ್ಲಾ ಪಂಚಾಯತ್,ತಾಲೂಕು ಪಂಚಾಯತ್ ರಾಷ್ಟ್ರೀಯಾ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ನಗರ ಸಭೆ ಉಡುಪಿ ಇವರ ಸಹಯೋಗದಲ್ಲಿ ಮಲ್ಪೆಯ ಸೀ ವಾಕ್ ಬಳಿ ಉಡುಪಿ ಸಂಜೀವಿನಿ ತ್ರಿಶಕ್ತಿ ಸಂಜೀವಿನಿ ಸ್ವಸಹಾಯ ಗುಂಪುಗಳ ಉತ್ಪನ್ನ ಮಾರಾಟ ಮಳಿಗೆಯನ್ನು ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್ ರವರು ಉದ್ಘಾಟಿಸಿದರು.

ಮಲ್ಪೆ ಸೀ ವಾಕ್ ಬಳಿಯ ಸಂಜೀವಿನಿ ತ್ರಿಶಕ್ತಿ ಸಂಜೀವಿನಿ ಸ್ವಸಹಾಯ ಗುಂಪುಗಳ ಉತ್ಪನ್ನ ಮಾರಾಟ ಮಳಿಗೆಯನ್ನು ನಗರ ಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಸೇರಿದಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ನವೀನ್ ಭಟ್, ರಿಬ್ಬನ್ ಕತ್ತರಿಸಿ ದೀಪ ಬೆಳಗಿಸುವ ಮೂಲಕ ಮಳಿಗೆಯನ್ನು ಉದ್ಘಾಟಿಸಿದರು.
ಬಳಿಕ ಉದ್ಘಾಟನಾ ಮಾತುಗಳನ್ನಾಡಿದ ನಗರ ಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ರವರು ತ್ರಿಶಕ್ತಿಗಳು ಜನ ಜಂಗುಳಿಯಿರುವ ಕಡೆ ತನ್ನ ಮಳಿಗೆಯನ್ನ ತೆರೆದಿರುವುದು ಜಿಲ್ಲೆಗೆ ಮಾದರಿಯಾಗಿದೆ. ಮಹಿಳೆಯರು ಅಂಗಡಿಗಳನ್ನು ನಡೆಸುವುದರೊಂದಿಗೆ ಉದ್ಯಮವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಬಳಿಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಾದ ವೈ ನವೀನ್ ಭಟ್ ಮಾತನಾಡಿ ಸಂಜೀವಿನಿ ಸ್ವಸಹಾಯ ಸಂಘಗಳ ಮೂಲಕ ಸಂಜೀವಿನಿ ಎನ್ನುವ ಉತ್ಪನ್ನ ಇಡೀ ಜಿಲ್ಲೆಯಲ್ಲಿ ದೊಡ್ಡ ಮಳಿಗೆಯಾಗಲಿ.ಇದರ ಗುರುತು ಸಾರ್ವಜನಿಕರಿಗೆ ತಿಳಿದು ಸಂಜೀವಿನಿ ಉತ್ಪನ್ನಗಳನ್ನು ಜನರು ಬಳಸುವಂತಾಗಲಿ ಎಂದರು.

ಕಾರ್ಯಕ್ರಮದಲ್ಲಿ ನಗರ ಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಸದಸ್ಯರಾದ ಸುಂದರ್ ಕಲ್ಮಾಡಿ, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪಾಂಡುರಂಗ ಮಲ್ಪೆ, ಮಲ್ಪೆ ಬೀಚ್ ನಿರ್ವಾಹಕರಾದ ಸಂದೇಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿ ಸಿಲ್ವಾ, ಎನ್ ಆರ್ ಎಲ್ ಎಮ್ ನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ್ ಆಚಾರ್, ಜಿಲ್ಲಾ ವ್ಯವಸ್ಥಾಪಕ ಅವಿನಾಶ್,,ವಲಯ ಮೇಲ್ವಿಚರಾಕ ಸಂತೋಷ್ , ಬಡಾನಿಡಿಯೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಲತಿ,, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ, ಸದಸ್ಯರಾದ ಜೊಸೆಫ್ ಫೆರ್ನಾಂಡಿಸ್,ಮಾಜಿ ಅಧ್ಯಕ್ಷ ಉಮೇಶ್ ಪೂಜಾರಿ, ಬಡಾನಿಡಿಯೂರು ನವಶಕ್ತಿ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರಾದ ತಾರಾ ಪ್ರಭಾಕರ್, ಲತಾ ಟಿ ಗೋಪಾಲ್, ಮತ್ತಿತರರು ಉಪಸ್ಥಿತರಿದ್ದರು .

 
 
 
 
 
 
 
 
 
 
 

Leave a Reply