ಅಂಡಮಾನ್ ಜೈಲಿನಲ್ಲಿ ಸಾವರ್ಕರ್ ಅವರಿಗೆ ಮಾನಸಿಕ ಚಿತ್ರಹಿಂಸೆ ನೀಡಲು, ಮನೋಬಲ ಕುಗ್ಗಿಸಲು ಅವರ ಎದುರಿಗೇ ಕೈದಿಗಳನ್ನು ನೇಣು ಹಾಕಲಾಗುತ್ತಿತ್ತು. ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿತ್ತು. ಜೊತೆಗೆ ಹೊರಗೆ ಬ್ರಿಟಿಷರ ಅಟ್ಟಹಾಸ ಹೆಚ್ಚುತ್ತಿತ್ತು. ಸಮಾಜದಲ್ಲಿ ಜಾತಿ ದ್ವೇಷ, ಬೇಧ ಮಿತಿ ಮೀರುತ್ತಿತ್ತು. ಅಂಥ ಪರಿಸ್ಥಿತಿಯಲ್ಲಿ ಬಂಧಿಯಾಗಿ ಏನನ್ನೂ ಸಾಧಿಸಲಾಗದು ಎಂಬುದನ್ನು ಅರಿತ ಸಾವರ್ಕರ್ ಅನ್ಯಮಾರ್ಗ ಕಾಣದೇ ಜೈಲಿನಿಂದ ಹೊರಬರಲು ತೀರ್ಮಾನಿಸಿದರು ಎಂದು ಸಾತ್ಯಕಿ ಹೇಳಿದರು
ಜೈಲಿನಿಂದ ಹೊರಬಂದ ಬಳಿಕ ಮಹಾರಾಷ್ಟ್ರದ ನಾಸಿಕ್ನಲ್ಲಿ `ಮಿತ್ರಮೇಳ’ ಎಂಬ ಸಂಘಟನೆ ಆರಂಭಿಸಿದ ಸಾವರ್ಕರ್, ಛತ್ರಪತಿ ಶಿವಾಜಿ ಪರಾಕ್ರಮಗಳನ್ನು ಯುವ ಮನಸ್ಸುಗಳಲ್ಲಿ ತುಂಬುವ ಕೆಲಸ ಮಾಡಿದರು. ಬ್ರಿಟಿಷರ ವಿರುದ್ಧ ಹೋರಾಡಲು ಕ್ರಾಂತಿಕಾರಿಗಳನ್ನು ಹುಟ್ಟುಹಾಕಿದರು. ಎರೆಡೆರಡು ಬಾರಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಅವರು ಅಂಡಮಾನ್ ಜೈಲಿನಲ್ಲಿ ಕ್ರೂರಾತಿಕ್ರೂರ ಶಿಕ್ಷೆ ಅನುಭವಿಸಿದರು.
ಅಂಡಮಾನ್ ಸೆಲ್ಯುಲರ್ ಜೈಲಿನಲ್ಲಿ ಸಾವರ್ಕರ್ ಅವರಿಗೆ ಓದಲು, ಬರೆಯಲು ಕನಿಷ್ಟ ಪೆನ್ನು ಪುಸ್ತಕಗಳನ್ನೂ ಕೊಟ್ಟಿರಲಿಲ್ಲ. ಆದರೆ, ಗಾಂಧೀಜಿ ಅವರಿಗೆ ಜೈಲಿನಲ್ಲಿಯೂ ಸ್ಟಾರ್ ಹೋಟೆಲ್ ಗಳಲ್ಲಿ ಸಿಗುವ ಸೌಲಭ್ಯಗಳಿದ್ದವು ಎಂದು ವ್ಯಂಗ್ಯವಾಡಿದರು. ಸಾವರ್ಕರ್ ಜೈಲಿನಲ್ಲಿ ಅನುಭವಿಸಿದ ಯಾತನೆಯನ್ನು ಊಹಿಸುವುದೂ ಅಸಾಧ್ಯ. ಹೀಗಿರುವಾಗ, ಕೇವಲ ತುಂಡು ಬಟ್ಟೆ ಹಾಗೂ ಕೋಲಿನಿಂದ ದೇಶಕ್ಕೆ ಸ್ವಾತಂತ್ರ್ಯ ಬಂತು ಎಂದರೆ ಯಾರೂ ನಂಬುವ ಮಾತಲ್ಲ ಎಂದರು.
ಸಾವರ್ಕರ್ ಜೈಲಿನಿಂದ ಹೊರಬಂದ ಬಳಿಕವೂ ಸ್ವಂತ ಬಲದಿಂದ ಬೆಳೆದು ಬಂದವರಾಗಿದ್ದರು. ಸಾವರ್ಕರ್ ಅವರಿಗೆ ಭಾರತ ರತ್ನ ಸಿಗದಿರುವುದು ದೊಡ್ಡ ವಿಷಯವಲ್ಲ. ಅವರಿಗೆ ಭಾರತ ರತ್ನ ಸಿಕ್ಕಿದ್ದಲ್ಲಿ ಅಮಾರ್ಥ್ಯಸೇನ್, ಮದರ್ ಥೆರೆಸಾ ಸಾಲಿನಲ್ಲಿ ಅವರೂ ನಿಲ್ಲುತ್ತಾರೆ.