ಉಡುಪಿ :- ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ್ದಾರೆ ಎಂಬ ಕಾರಣಕ್ಕಾಗಿ ತರಗತಿ ನಿರಾಕರಿಸಿದ ಘಟನೆಗೆ ಇನ್ನೂ ಬಗೆಹರಿದಿಲ್ಲ. ಇದರ ನಡುವೆ ವಿದ್ಯಾರ್ಥಿನಿ ಯರು ಇಂದು ಮತ್ತೆ ಭಿತ್ತಿ ಪತ್ರ ಹಿಡಿದು ಪ್ರತಿಭಟಿ ಸಿದ್ದಾರೆ
ಇಂದು ವಿದ್ಯಾರ್ಥಿಗಳು ನಮಗೆ ನ್ಯಾಯ ಒದಗಿಸಿ ಎಂದು ಕಾಲೇಜು ಗೇಟ್ ಮುಂಭಾಗ ಭಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಮುಂದಾಗಿದ್ದಾರೆ.
ಅಧಿಕಾರಿಗಳು ಗಮನಹರಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ, ನಮಗೆ ತರಗತಿಗಳು ಸಿಗುತ್ತಿಲ್ಲ, ನಮ್ಮ ಸಂವಿಧಾನಾತ್ಮಕ ಹಕ್ಕನ್ನು ಕಸಿದಿಟ್ಟು ಮಾನಸಿಕವಾಗಿ ತೊಂದರೆ ಕೊಡುತ್ತಿದ್ದಾರೆಯೆಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿ ಕೊಳ್ಳುತ್ತಿದ್ದಾರೆ.