ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್: ಮೊಬೈಲ್ ಬ್ಯಾಂಕ್‌ಗೆ ಸ್ವಾಗತ

ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನಿoದ ಪರಿಚಯಿಸಲ್ಪಟ್ಟ ದೇಶದ ಬ್ಯಾಂಕಿoಗ್ ಇತಿಹಾಸದಲ್ಲಿಯೇ ಪ್ರಥಮವಾಗಿ ಹೊಸ ಆವಿಷ್ಕಾರವಾದ ಮೊಬೈಲ್ ಬ್ಯಾಂಕಿoಗ್ ಘಟಕವು ಉಡುಪಿಯ ದೊಡ್ಡಣಗುಡ್ಡೆಯಲ್ಲಿ ಕಾರ್ಯಾರಂಭ ಮಾಡಲು ಪ್ರವೇಶಿಸಿದಾಗ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರು, ಗ್ರಾಮಸ್ಥರು ಮತ್ತು ಬ್ಯಾಂಕಿನ ಗ್ರಾಹಕರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜರಗಿದ ಸಮಾರಂಭದಲ್ಲಿ ಉಪಸ್ಥಿತರಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾಂಕಿನ ನಿರ್ದೇಶಕರಾದ ಐಕಳಬಾವ ಶ್ರೀ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರು, ಬ್ಯಾಂಕಿನ ಸಾಧನೆ ಮತ್ತು ಮೊಬೈಲ್ ಬ್ಯಾಂಕಿನಿoದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಮೊಬೈಲ್ ಬ್ಯಾಂಕಿನ ಸೌಲಭ್ಯಗಳನ್ನು ಸ್ಥಳೀಯರು ಪಡೆದುಕೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನವೋದಯ ಸ್ವಸಹಾಯ ಗುಂಪಿನ ಸದಸ್ಯರುಗಳಿಗೆ ಸಮವಸ್ತçವನ್ನು ವಿತರಿಸಲಾಯಿತು. ಸಮಾರಂಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ಬಿ. ಅಶೋಕ್ ಕುಮಾರ್ ಶೆಟ್ಟಿ ಮತ್ತು ಶ್ರೀ ರಾಜೇಶ್ ರಾವ್ ಪಾಂಗಾಳ ಇವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಶ್ರೀ ಪ್ರಭಾಕರ ಪೂಜಾರಿ ಮತ್ತು ಉಡುಪಿ ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಇವರು ಅತಿಥಿಗಳಾಗಿ ಭಾಗವಹಿಸಿ ಮೊಬೈಲ್ ಬ್ಯಾಂಕ್‌ಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಉಡುಪಿ ಲೀಡ್ ಬ್ಯಾಂಕ್ ಚೀಫ್ ಮೇನೇಜರ್ ಶ್ರೀ ಪಿ. ಎಂ. ಪಿಂಜಾರ್ ಇವರು ಭಾಗವಹಿಸಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಗ್ರಾಹಕ ಸ್ನೇಹಿ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಗ್ರಾಮೀಣ ಭಾಗದ ಜನರಿಗೆ ಮೊಬೈಲ್ ಬ್ಯಾಂಕ್ ಮೂಲಕ ಸೇವೆ ನೀಡುವುದನ್ನು ಶ್ಲಾಘಿಸಿದರು. ಉದ್ಯಮಿ ಶ್ರೀ ರಾಧಾಕೃಷ್ಣ ಶೆಟ್ಟಿ ಉಪಸ್ಥಿತರಿದ್ದು, ಮೊಬೈಲ್ ಬ್ಯಾಂಕಿoಗ್‌ಗೆ ಶುಭ ಹಾರೈಸಿದರು. ಬ್ಯಾಂಕಿನ ಎ.ಜಿ.ಎಂ. ಶ್ರೀ ನಿತ್ಯಾನಂದ ಸೇರಿಗಾರ್ ಇವರು ಸ್ವಾಗತಿಸಿದರು. ಬ್ಯಾಂಕಿನ ಉಡುಪಿ ಶಾಖೆಯ ವ್ಯವಸ್ಥಾಪಕ ಸುನೀಲ್ ಕುಮಾರ್ ಎಸ್. ಇವರು ವಂದಿಸಿದರು. ಬ್ಯಾಂಕಿನ ಬ್ರಹ್ಮಾವರ ಶಾಖೆಯ ವ್ಯವಸ್ಥಾಪಕ ಶ್ರೀ ವರದರಾಜ ಶೆಟ್ಟಿ ಇವರು ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply