ತಾಲೂಕು ಶಿಕ್ಷಕರ ಸಂಘದ ವತಿಯಿಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತ ಶಿಕ್ಷಕರಿಗೆ ಅಭಿನಂದನೆ

ಬ್ರಹ್ಮಾವರ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬ್ರಹ್ಮಾವರ ತಾಲೂಕು ಶಾಖೆ ವತಿಯಿಂದ ಜಿಲ್ಲಾ ಮಟ್ಟದ ನೌಕರ ಸಂಘದ ಆಶ್ರಯದಲ್ಲಿ ನಡೆದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮವು ತಾಲೂಕು ಅಧ್ಯಕ್ಷ ಪ್ರಶಾಂತ ಶೆಟ್ಟಿ ಹಾವಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಯವರಾದ ಮಾನ್ಯ ಶ್ರೀ ಬಿ ಟಿ ನಾಯಕ್ ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾದ 40 ಶಿಕ್ಷಕರನ್ನು ಅಭಿನಂದಿಸಿ ಶುಭ ಹಾರೈಸಿದರು.
ವಲಯ ಸಂಘಟನೆಯ ಗೌರವಾಧ್ಯಕ್ಷೆ ಕುಸುಮ, ಸಾವಿತ್ರಿ ಬಾಯಿ ಫುಲೆ ಸಂಘದ ವಲಯ ಅಧ್ಯಕ್ಷ ಸೇಸು, ತಾಲೂಕು ಕೋಶಾಧಿಕಾರಿ ಗೋಪಾಲ ನಾಯ್ಕ, ಜಿಲ್ಲಾ ಕೋಶಾಧಿಕಾರಿ ರವಿ ಎಸ್ ಪೂಜಾರಿ, ಜಿಲ್ಲಾ ಉಪಾಧ್ಯಕ್ಷೆ ಮಂಜುಳಾ ಜಯಕರ್ ,ವಲಯ ಪದಾಧಿಕಾರಿಗಳು ,ಶಿಕ್ಷಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply