ಸದರಿ ಯೋಜನೆಯನ್ನು ಜಿಲ್ಲೆ/ತಾಲೂಕುಗಳಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ದಕ್ಷಿಣ ಕನ್ನಡ ಜಿಲ್ಲೆಯ ನಿಗಮದ ಮಂಗಳೂರು ಬಸ್ಸು ನಿಲ್ದಾಣ ಹಾಗೂ ಉಡುಪಿ ಜಿಲ್ಲೆಯ ನಿಗಮದ ಡಾ|| ವಿ ಎಸ್ ಆಚಾರ್ಯ ಬಸ್ಸು ನಿಲ್ದಾಣ, ಬನ್ನಂಜೆ ಉಡುಪಿ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಬರುವ ನಿಗಮದ ಕುಂದಾಪುರ ಬಸ್ಸು ನಿಲ್ದಾಣಗಳಲ್ಲಿ ಜೂನ್ 11 ರಂದು ಮಧ್ಯಾಹ್ನ 12:30 ಗಂಟೆಗೆ ಸದರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ.
ಜಿಲ್ಲಾ ಮಟ್ಟದಲ್ಲಿ ಜರಗುವ ಸದರಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೇ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು , ಸ್ಥಳೀಯ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಮತ್ತು ಚುನಾಯಿತ ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.