ಶ್ರೀ ಶಾಂತಿಮತೀ ಪ್ರತಿಷ್ಠಾನ ದ ಸಾಧಕರೆಡೆ ನಮ್ಮ ನಡೆ ಕಾರ್ಯಕ್ರಮ

ಶ್ರೀ ಶಾಂತಿಮತೀ ಪ್ರತಿಷ್ಠಾನ ದ ಸಾಧಕರೆಡೆ ನಮ್ಮ ನಡೆ ಕಾರ್ಯಕ್ರಮದ ಅಂಗವಾಗಿ ಇಂದು ಉಡುಪಿ ಅಂಬಾಗಿಲಿನ ಪ್ರದ್ಯುಮ್ನ ಉಪಾಧ್ಯಾಯ ಅವರನ್ನು ಗೌರವಿಸಲಾಯಿತು, ಸಂಗೀತ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಅವರನ್ನು ಗೌರವಿಸಲಾಯಿತು, ಏಷಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದ ಇವರನ್ನು ಇಂದು ಸಂಜೆ ಸಾಧಕರ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಗೌರವಿಸಲಾಯಿತು, ಶಾಂತಿಮತೀ ಪ್ರತಿಷ್ಠಾನದ ಅಧ್ಯಕ್ಷರಾದ ಚಂದ್ರಶೇಖರ ಅಡಿಗಳು ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು, ಶ್ರೀಯುತ ಮಾಧವ ರಾವ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು, ಪ್ರತಿಷ್ಠಾನದ ಮಾಜಿ ಅಧ್ಯಕ್ಷರಾದ ಶ್ರೀ ಉಮೇಶ್ ಬಾಯರಿ ಅವರು ಸ್ವಾಗತಿಸಿದರು, ಡಾಕ್ಟರ್ ವಿಜಯ ಮಂಜರ್ ಪ್ರಾಸ್ತಾವಿಕ ಮಾತನಾಡಿದರು, ಕಾರ್ಯದರ್ಶಿ ಸಚ್ಚಿದಾನಂದ ಅಡಿಗ ಅವರು ಧನ್ಯವಾದ ಸಮರ್ಪಣೆಗೈದು ರಾಮಚಂದ್ರ ಉಡುಪ ಬಾರ್ಕೂರು ಕಾರ್ಯಕ್ರಮ ನಿರೂಪಿಸಿದರು, ಲಘು ಉಪಹಾರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು, ಶಾಂತಿಮತೀ ಪ್ರತಿಷ್ಠಾನ ದ ಸದಸ್ಯರು ಭಾಗವಹಿಸಿದ್ದರು, ಗೌರವ ಸ್ವೀಕರಿಸಿ ಮಾತನಾಡಿದ ಪ್ರದ್ಯುಮ್ನ ಉಪಾಧ್ಯಾಯ ಅವರು ನನ್ನ ಈ ಸಾಧನೆಗೆ ಬೆನ್ನುಲುಬಾಗಿ ನಿಂತವರು ನನ್ನ ತಾಯಿ, ಅವರ ಆಶೀರ್ವಾದ ಹಾಗೂ ಪ್ರೋತ್ಸಾಹದಿಂದ ಈ ಸಾಧನೆಯನ್ನು ಮಾಡಲು ಸಾಧ್ಯವಾಯಿತು ಎಂದರು,

 
 
 
 
 
 
 
 
 
 
 

Leave a Reply