ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್: ನಾಲ್ವರ ಸಾವು..


ಶಿರೂರು: ಇಲ್ಲಿನ ಟೋಲ್ ಪ್ಲಾಜಾ ಬಳಿ ಅತೀ ವೇಗದಿಂದ ಬಂದ ಆ್ಯಂಬುಲೆನ್ಸ್ ನಿಯಂತ್ರಣ ತಪ್ಪಿ ಟೋಲ್ ಸಮೀಪದ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆಗೆ ಸಂಬ೦ಧಿಸಿದ೦ತೆ ಗಾಯಗೊಂಡಿದ್ದ ನಾಲ್ವರು ಮೃತಪಟ್ಟಿದ್ದಾರೆ.

ಮೃತರನ್ನು ಗಜಾನನ, ಗೀತಾ, ಲೋಕೇಶ್, ಮಂಜುನಾಥ ಎಂದು ಗುರುತಿಸಲಾಗಿದೆ. ರೋಗಿಯನ್ನು ಆ್ಯಂಬುಲೆನ್ಸ್ ನಲ್ಲಿ ಹೊನ್ನಾವರದಿಂದ ಕುಂದಾಪುರಕ್ಕೆ ಚಿಕಿತ್ಸೆಗಾಗಿ ಕರೆ ತರುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

 
 
 
 
 
 
 
 
 
 
 

Leave a Reply