ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ತರಬೇತಿ ಶಿಬಿರ 

ಶಿರ್ವ: ಇಂದು ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು ತಮ್ಮ ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆ, ಯೋಗ ಮತ್ತು ಕ್ರೀಡೆಯಲ್ಲಿ ತೊಡಗಿಸಿಕೊಂಡು ಆರೋಗ್ಯವಂತರಾಗಬೇಕು.ಯೋಗದಿಂದ ದೇಹ ಮತ್ತು ಮನಸ್ಸನ್ನು ನಿಯಂತ್ರಿಸಿಕೊಳ್ಳುವ ಮೂಲಕ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದೆಂದು ಶಿರ್ವ ವಲಯ ಪತಂಜಲಿ ಯೋಗ ಸಮಿತಿಯ ಯೋಗಗುರುಗಳಾದ ಶ್ರೀ ರಾಧಾಕೃಷ್ಣ ಪ್ರಭು ಅವರು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ಮತ್ತು ಫಿಟ್ನೆಸ್ ಸೆಲ್ ಹಾಗೂ ಎನ್.ಸಿ.ಸಿ ಸಂಯುಕ್ತವಾಗಿ ಏರ್ಪಡಿಸಿದ ಯೋಗ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಘಾಟಿಸಿ ಮಾತನಾಡಿದರು. 

ಆರೋಗ್ಯಯುತ ಯುವಜನರನ್ನು ರೂಪಿಸಲು ಯೋಗ ಮತ್ತು ಕ್ರೀಡಾ ಕಡ್ಡಾಯವಾಗಿ ಶಿಕ್ಷಣದಲ್ಲಿ ಭಾಗವಾಗಿದೆ. ಈ ಶಿಬಿರದ ಪ್ರಯೋಜನವನ್ನು ವಿದ್ಯಾರ್ಥಿಗಳು ಸಂಪೂರ್ಣವಾಗಿ ಪಡೆದು ಮುಂದೆ ಇತರರಿಗೆ ಮಾದರಿಯಾಗಿ ಸಮಾಜಸೇವೆಯನ್ನು ಮಾಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿ ಎಲ್ಲರಿಗೂ ಶುಭಹಾರೈಸಿದರು. 

ಈ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಗುರುಗಳಾದ ಶ್ರೀ ಅನಂತ ರಾಯ ಶೆಣೈ, ಯೋಗ ಮತ್ತು ಫಿಟ್ನೆಸ್ ಸೆಲ್ ನಿರ್ದೇಶಕ ಶ್ರೀ ಜೆಫ್ ಸನ್ನಿ ಡಿಸೋಜಾ, ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್, ಅಧ್ಯಾಪಕ ವೃಂದ,ಆಡಳಿತ ಸಿಬ್ಬಂದಿ, ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಅನುಕ್ ನಾಯಕ ಸಹಕರಿಸಿದರು.ಕು. ರಕ್ಷ ಮತ್ತು ಬಳಗ ಪ್ರಾರ್ಥಿಸಿ,ಕು. ಜಿಯಾ ಸಿ ಪೂಜಾರಿ ವಂದಿಸಿದರು., ಕು. ಸನಿಯಾ ಶೇಕ್ ಸ್ವಾಗತಿಸಿ, ಕು. ತರನಂ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply