ಪಟಿಯಾಲಾ ಜೈಲಿನಿಂದ ಬಿಡುಗಡೆಯಾದ ನವಜೋತ್ ಸಿಂಗ್ ಸಿಧು

ಪಟಿಯಾಲಾ: ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು 34 ವರ್ಷದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸದಲ್ಲಿದ್ದು ಶನಿವಾರ ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಶನಿವಾರ ಬಿಡುಗಡೆ

34 ವರ್ಷಗಳ ಹಿಂದೆ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿ ಒಬ್ಬನ ಸಾವಿಗೆ ಕಾರಣವಾಗಿದ್ದು ಈ ಕುರಿತು ಸುಪ್ರೀಂ ಕೋರ್ಟ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. 

1988 ಡಿಸೆಂಬರ್ 27ರಂದು ಸಿಧು ಪಟಿಯಾಲ ಪ್ರಜೆ 65 ವರ್ಷದ ಗುರ್ನಾಮ್ ಸಿಂಗ್ ಜೊತೆ ಪಾರ್ಕಿಂಗ್ ಜಾಗದ ಬಗ್ಗೆ ಜಗಳವಾಡಿ ಗುರ್ನಾಮ್ ಸಿಂಗ್ ಅವರನ್ನು ಸಿಧು ಮತ್ತು ಅವರ ಸ್ನೇಹಿತ ರೂಪಿಂದರ್ ಸಿಂಗ್ ಸಂಧು ಅವರು ಕಾರಿನಿಂದ ಎಳೆದೊಯ್ದು ಹೊಡೆದಿದ್ದರು. ಪರಿಣಾಮ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ಸಿದು ಅವರು ಗುರ್ನಾಮ್ ಸಿಂಗ್ ಅವರ ತಲೆಗೆ ಹೊಡೆದು ಕೊಂದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದರು.

 2018ರಲ್ಲಿ ವ್ಯಕ್ತಿಯೊಬ್ಬರಿಗೆ ಉದ್ದೇಶಪೂರ್ವಕವಾಗಿ ಹಾನಿ ಉಂಟುಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಸಿದುಗೆ ಒಂದು ಸಾವಿರ ರೂಪಾಯಿ ಶಿಕ್ಷೆಯನ್ನು ವಿಧಿಸಿದ್ದು ನಂತರ ತನ್ನದೇ ಆದ ತೀರ್ಪನ್ನು ಪರಿಶೀಲಿಸಿದ ನ್ಯಾಯಾಲಯವು ಸಿದುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

 
 
 
 
 
 
 
 
 
 
 

Leave a Reply