ಮಂಗಳೂರು: ಕಲ್ಲಿನ ಕೋರೆಗೆ ಈಜಲು ಇಳಿದಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜು.24ರ ಭಾನುವಾರ ಮಲ್ಲೂರು ಸಮೀಪದ ಉಳಾಯಿಬೆಟ್ಟು ಬದ್ರಿಯ ನಗರ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಜೋಡುಕಟ್ಟೆಯ ನಿವಾಸಿ ಮುಹಮ್ಮದ್ ಶಿಯಾಝ್ ಎಂದು ಗುರುತಿಸಲಾಗಿದೆ.
ಸಂಜೆ ವೇಳೆಗೆ ಶಿಯಾಝ್ ತನ್ನ ಸ್ನೇಹಿತರೊಂದಿಗೆ ಬದ್ರಿಯಾ ನಗರದ ಪೆರ್ಮುಂಕಿ ಕಾಯರ ಪದವುನಲ್ಲಿರುವ ಕಲ್ಲಿನ ಕೋರೆಗೆ ಈಜಲು ಇಳಿದಿದ್ದರು.
ಈ ವೇಳೆ ಈಜಲು ಸಾಧ್ಯವಾಗದೆ ಶಿಯಾಝ್ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.