ದಿನಾಂಕ: 07/02/2022 ರಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲಿಗ್ರಾಮ ಹಾಗೂ ಕುಮಾರ ಆಗ್ರೋ ಪ್ರಾಡಕ್ಟ್ ಪಾರಂಪಳ್ಳಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ತಾಯಿ ಮಗುವಿನ ಆರೋಗ್ಯ ಮತ್ತು ಕರೋನ, ಕ್ಷಯ ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಕಲಾವಿದರಾದ ಡಾ.ಗಣೇಶ್ ಗಂಗೊಳ್ಳಿ ಮತ್ತು ಬಳಗದವರಿಂದ ಬೀದಿನಾಟಕ ಮತ್ತು ಜಾನಪದ ಕಲಾ ಪ್ರದರ್ಶನ ನಡೆಯಿತು, ಕಾರ್ಯಕ್ರಮವು ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ ರಾಘವೇಂದ್ರ ರಾವ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಶ್ಯಾಮಲಾ ಅವರು ಕಾರ್ಯಕ್ರಮ ನಿರ್ವಹಿಸಿದರು.