ಉಡುಪಿಯಲ್ಲಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ

ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಉಡುಪಿ ವಲಯ, ನಿಕ್ಕಾನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಪ್ರವಾಸೋಧ್ಯಮ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜ್ಯ ಮಟ್ಟದ ” “ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ” ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಿದೆ. ಬಹುಮಾನಿತರಿಗೆ ಪ್ರಥಮ 10,000.00, ದ್ವಿತೀಯ 5,000.00, ತ್ರಿತೀಯ 3,000.00 ಹಾಗು 5 ಸಮಾಧಾನಕರ ಬಹುಮಾನಗಳು, ಆಕರ್ಷಕ ಸ್ಮರಣಿಕೆ, ವಿಶೇಷ ಉಡುಗೊರೆಗಳು ಇರಲಿದೆ.

​ಸ್ಪರ್ಧೆಯ ನಿಯಮಗಳು: ಪ್ರತಿ ಸ್ಪರ್ಧಿಯು ಗರಿಷ್ಠ ನಾಲ್ಕು ಛಾಯಾಚಿತ್ರಗಳನ್ನು​ ಕಳುಹಿಸಬಹುದು.​ ​ಒಂದು ಛಾಯಾಚಿತ್ರದ ಗಾತ್ರ ಗರಿಷ್ಠ 4​MB ಗಿಂತ ಹೆಚ್ಚು​ ಮೀರಬಾರದು.​ ಮೊಬೈಲ್‌ನಲ್ಲಿ ತೆಗೆದ ಛಾಯಾಚಿತ್ರಗಳನ್ನು ಸ್ಪರ್ಧೆಗೆ ​ಪರಿಗಣಿಸುವುದಿಲ್ಲ. ಪೋಟೋಶಾಪ್‌ನಲ್ಲಿ ತಿರುಚಲಾದ ಮತ್ತು ವಾಟರ್‌ ಮಾರ್ಕ್‌​ ಇದ್ದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.​ ಒಂದು ಬಾರಿ ನೋಂದಣಿಯಾದ ಛಾಯಾಚಿತ್ರಗಳನ್ನು​ ಬದಲಾಯಿಸಲು ಅವಕಾಶವಿರುವುದಿಲ್ಲ.

ಸ್ಪರ್ಧೆಯಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶ.​ ಇಮೇಲ್‌ ಮೂಲಕ ಕಳುಹಿಸುವಾಗ​ ತಮ್ಮ ಭಾವಚಿತ್ರ, ಹೆಸರು, ವಿಳಾಸ, ದೂರವಾಣಿ ಹಾಗೂ​ ನೋಂದಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು​.ತೀರ್ಪುಗಾರರ ತೀರ್ಮಾನವೇ ಅಂತಿಮ.​ ಉಡುಪಿಯ ರಥಬೀದಿಯಲ್ಲಿ ನಡೆಯುವ ವಿಟ್ಟಪಿಂಡಿಯ​ ದಿನದಂದು (20-08-2022) ಸೆರೆಹಿಡಿದ ಛಾಯಾಚಿತ್ರಗಳು​ ಮಾತ್ರ.​ ನೋಂದಾಯಿಸಲು ಕೊನೆಯ ದಿನಾಂಕ 17-08-2022​.​​ನೋಂದಾಯಿಸಿದ ಎಲ್ಲಾ ಛಾಯಾಗ್ರಾಹಕರಿಗೆ ಒಂದು​ ​ಟಿ-ಶರ್ಟ್‌ ​ ​ಮತ್ತು ಒಂದು ಕ್ಯಾಪ್‌ ಉಚಿತ.​ ಛಾಯಾಚಿತ್ರವನ್ನು ಕಳುಹಿಸಲು ಕೊನೆಯ ದಿನಾಂಕ​ 31.08.2022ರಂದು​ ಪ್ರಕಟಿಸಲಾಗುವುದು.​

ಫಲಿತಾಂಶವನ್ನು ದಿನಾಂಕ 09.09.2022ರಂದು ಪ್ರಕಟಿಸಲಾಗುವುದು. ಟಿ-ಶರ್ಟ್‌ ಧರಿಸಿ​ಯೇ ಛಾಯಾ ಗ್ರಹಣವನ್ನು ಮಾಡತಕ್ಕದ್ದು.​ ಸ್ಪರ್ಧೆಗೆ ಬಂದ ಛಾಯಾಚಿತ್ರವನ್ನು ಯಾವುದೇ ಪೂರ್ವಾನುಮತಿ ಇಲ್ಲದೆ​ ಬಳಸುವ ಹಕ್ಕನ್ನು ಪಡೆದಿರುತ್ತದೆ. ​

ಛಾಯಾಚಿತ್ರಗಳನ್ನು ​ಕಳಿಸ ಬೇಕಾದ ಇಮೈಲ್ : [email protected]. ಸಂಪರ್ಕ: 72041 46368, 972 52363, 99646​ ​68304. 99004 07474

 
 
 
 
 
 
 
 
 
 
 

Leave a Reply