ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಪೋಸ್ಟರ್ ಲೋಕಾರ್ಪಣೆ

ಮಂಗಳೂರಿನ ವೈಭವದ ದಸರಾ ಹಬ್ಬದ ರಂಗನ್ನು ಮತ್ತಷ್ಟು ಹೆಚ್ಚಿಸಲು “ಮಂಗಳೂರು ದಸರಾ ವೈಭವ” ಶೀರ್ಷಿಕೆಯಡಿ ರಾಜ್ಯ ಮಟ್ಟದ ಪೊಟೋಗ್ರಫಿ ಮತ್ತು ವೀಡಿಯೋಗ್ರಫಿ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.
 ಇದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಗಳವಾರ ಶ್ರೀ ಕ್ಷೇತ್ರ ಕುದ್ರೋಳಿ ದೇವಸ್ಥಾನದ ಸಾಂಸ್ಕ್ರತಿಕ ವೇದಿಕೆಯಲ್ಲಿ ಜರುಗಿತು. ಶ್ರೀ ಕ್ಷೇತ್ರ ಕುದ್ರೋಳಿ ಆಡಳಿತ ಕೋಶಾಧಿಕಾರಿ ಪದ್ಮರಾಜ್ ಆರ್. ” ಮಂಗಳೂರು ದಸರಾ ವೈಭವ” ಪೋಸ್ಟರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕುದ್ರೋಳಿ ದೇವಸ್ಥಾನದ ಟ್ರಸ್ಟಿ ರವಿ ಶಂಕರ್ ಮಿಜಾರ್, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೆಂದ್ರ ಪೂಜಾರಿ, ಎಸ್.ಕೆ.ಪಿ.ಎ ಮಂಗಳೂರು ವಲಯದ ಅಧ್ಯಕ್ಷ ಹರೀಶ್ ಅಡ್ಯಾರ್, ಕಾರ್ಯದರ್ಶಿ ಅಜಯ್ ಕುಮಾರ್, ಕೋಶಾಧಿಕಾರಿ ಅರ್ಜುನ್ ಆರ್., ಗೌರವಾಧ್ಯಕ್ಷ ಪದ್ಮನಾಭ್ ಸುವರ್ಣ, ಜಿಲ್ಲಾ ಉಪಾಧ್ಯಕ್ಷ ರಮೇಶ್ ಕಲಾಶ್ರೀ, ಸಲಹಾ ಸಮಿತಿ ಸಂಚಾಲಕರು ಕರುಣಾಕರ್ ಕಾನಂಗಿ,
ಮಾಜಿ ಸಂಚಾಲಕರುಗಳಾದ ವಿಠ್ಠಲ ಚೌಟ, ನವೀನ್ ಚಂದ್ರ  ಕುದ್ರೋಳಿ, ಮಾಜಿ ಜಿಲ್ಲಾಧ್ಯಕ್ಷರಾದ ಜಗನ್ನಾಥ್ ಶೆಟ್ಟಿ, ಮಾಜಿ ವಲಯದಕ್ಷರಾದ  ಲೋಕೇಶ್, ಮನೋಹರ್ ಸೋನ್ಸ್, ಉಪಾಧ್ಯಕ್ಷ ಶ್ರೀಕಾಂತ್ ತಿಲಕ್, ಪ್ರಭಾಕರ್, ಮಾಜಿ ಗೌರವಾಧ್ಯಕ್ಷ ವಸಂತ್ ರಾವ್, ಹಾಗೂ ಇನ್ನಿತರ ಸದಸ್ಯರು ಭಾಗವಹಿಸಿದ್ದರು.
 
 
 
 
 
 
 
 
 
 
 

Leave a Reply