ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ದೆಹಲಿ ತೊರೆಯುವಂತೆ ಸೂಚನೆ

ದೆಹಲಿಯಲ್ಲಿ ವಾಯುಮಾಲಿನ್ಯ ಆತಂಕಕಾರಿ ಮಟ್ಟಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಒಂದಷ್ಟು ಕಾಲ ದೆಹಲಿಯಿಂದ ಬೇರೆಡೆ ಸ್ಥಳ ಬದಲಾವಣೆ ಮಾಡುವಂತೆ  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ವೈದ್ಯರು ಸೂಚಿಸಿದ್ದಾರೆ.

ದೀರ್ಘಕಾಲದ ಎದೆಯ ಸೋಂಕಿನಿಂದ ಬಳಲುತ್ತಿರುವ ಸೋನಿಯಾ ಅವರ ಆರೋಗ್ಯದ ಮೇಲೆ ವಾಯು ಮಾಲಿನ್ಯ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹಾಗಾಗಿ ಈ ಸೂಚನೆ ನೀಡಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ  ಇಂದು (ನ.20) ಅವರು ದೆಹಲಿಯಿಂದ ತೆರಳುವ ಸಾಧ್ಯತೆಯಿದೆ. ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಸೋನಿಯಾ, ಗೋವಾ ಅಥವಾ ಚೆನ್ನೈಗೆ ತೆರಳುವ ಸಾಧ್ಯತೆಗಳಿವೆ.

ಕಳೆದ ಆಗಸ್ಟ್ ನಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದ ನಂತರ ಸೋನಿಯಾ ಗಾಂಧಿ ನಿಯಮಿತವಾಗಿ ಔಷಧಿ ಸೇವಿಸುತ್ತಿದ್ದಾ ರಲ್ಲದೆ, ವೈದ್ಯರ ನಿಗಾದಲ್ಲಿದ್ದಾರೆ. ಅವರಿಗೆ ಎದೆಯ ಸೋಂಕು ಹಾಗೆಯೇ ಮುಂದು ವರಿದಿರುವ ಕಾರಣ ವೈದ್ಯರು ಈ ಸಲಹೆ ನೀಡಿದ್ದಾರೆ.

 
 
 
 
 
 
 
 
 
 
 

Leave a Reply