ಸಿಡಿಲು ಬಡಿದು ಸಪ್ತಮಿ ಹೋಟೆಲ್ ಸುಟ್ಟು ಭಸ್ಮ

ಉಡುಪಿ : ಜಿಲ್ಲೆಯಲ್ಲಿ ಸುರಿದ ಗುಡುಗು ಸಹಿತ‌ ಭಾರೀ ಮಳೆಯ ಹಿನ್ನಲೆಯಲ್ಲಿ ಸಿಡಿಲು ಬಡಿದು ಹೋಟೆಲೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಸಮೀಪವಿರುವ ಸಪ್ತಮಿ ಹೋಟೆಲಿಗೆ ಸಿಡಿಲು ಬಡಿದ ಪರಿಣಾಮ ಹೋಟೆಲು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಅಗ್ನಿ ‌ಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹಂತೋಟಿಗೆ ತಂದಿದ್ದಾರೆ.  

ಬುಧವಾರ ರಾತ್ರಿ ಬಾರಿ ಮಳೆ ಸುರಿಯಿತು. ಗುಡುಗು ಸಿಡಿಲು ಜತೆ ಸುಮಾರುಎರಡು ಗಂಟೆಗೂ ಅಧಿಕ ಕಾಲ ಒಂದೇ ಸಮನೆ ಮಳೆ ಸುರಿಯಿತು. ಉದ್ದು, ಹುರುಳಿ, ಹೆಸರು ಮುಂತಾದ ಧಾನ್ಯಗಳು ಮಳೆಯಿಂದ ಹಾನಿಯಾಗುವ ಸಂಭವವಿದ್ದು ರೈತರು ಅಕಾಲಿಕ ಮಳೆಯಿಂದ ಕಂಗಾಲಾಗಿದ್ದಾರೆ

 
 
 
 
 
 
 
 
 
 
 

Leave a Reply