ರಾಜ್ಯದ ಇತಿಹಾಸದಲ್ಲಿಯೇ ವಿನೂತನವಾಗಿ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ – ಫಲಿತಾಂಶ ಪ್ರಕಟ

ಬೆಂಗಳೂರು : ರಾಜ್ಯದ ಇತಿಹಾಸದಲ್ಲಿಯೇ ವಿನೂತನವಾಗಿ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಕಳೆದ ಮೂರು ವಾರಗಳ ಹಿಂದೆ ನಡೆದ ಸರಳ ಮಾದರಿಯ ಪರೀಕ್ಷೆ ಫಲಿತಾಂಶವನ್ನು ಇಂದು ನೂತನ ಶಿಕ್ಷಣ ಸಚಿವರಾಗಿರುವ ಬಿಸಿ ನಾಗೇಶ್ ಪ್ರಕಟಿಸಿದರು.

ಕೋವಿಡ್ ಸವಾಲಿನ ಸಮಯದಲ್ಲಿ ಪರೀಕ್ಷೆ ಬರೆದ ಎಲ್ಲರನ್ನೂ ಪಾಸ್​ ಮಾಡುವುದಾಗಿ ಮೊದಲೇ ಈ ಹಿಂದಿನ ಶಿಕ್ಷಣ ಸಚಿವರು ಭರವಸೆ ನೀಡಿದ್ದರು. ಅದರಂತೆ, ಒಬ್ಬ ವಿದ್ಯಾರ್ಥಿ ಹೊರತು ಪಡಿಸಿ ಪಾಸ್​ ಮಾಡಲಾಗಿದೆ. ಶೇ. 99.9 ಪಾಸ್ ಆಗಿದ್ದಾರೆ. ತಾನು ಪರೀಕ್ಷೆ ಬರೆಯುವ ಬದಲು ಬೇರೆಯುವರು ಪರೀಕ್ಷೆ ಬರೆದ ಕಾರಣ ಒಬ್ಬ ವಿದ್ಯಾರ್ಥಿಯನ್ನು ಫೇಲು ಮಾಡಲಾಗಿದೆ.

 
 
 
 
 
 
 
 
 
 
 

Leave a Reply