ಬೆಂಗಳೂರು : ರಾಜ್ಯದ ಇತಿಹಾಸದಲ್ಲಿಯೇ ವಿನೂತನವಾಗಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಕಳೆದ ಮೂರು ವಾರಗಳ ಹಿಂದೆ ನಡೆದ ಸರಳ ಮಾದರಿಯ ಪರೀಕ್ಷೆ ಫಲಿತಾಂಶವನ್ನು ಇಂದು ನೂತನ ಶಿಕ್ಷಣ ಸಚಿವರಾಗಿರುವ ಬಿಸಿ ನಾಗೇಶ್ ಪ್ರಕಟಿಸಿದರು.
ಕೋವಿಡ್ ಸವಾಲಿನ ಸಮಯದಲ್ಲಿ ಪರೀಕ್ಷೆ ಬರೆದ ಎಲ್ಲರನ್ನೂ ಪಾಸ್ ಮಾಡುವುದಾಗಿ ಮೊದಲೇ ಈ ಹಿಂದಿನ ಶಿಕ್ಷಣ ಸಚಿವರು ಭರವಸೆ ನೀಡಿದ್ದರು. ಅದರಂತೆ, ಒಬ್ಬ ವಿದ್ಯಾರ್ಥಿ ಹೊರತು ಪಡಿಸಿ ಪಾಸ್ ಮಾಡಲಾಗಿದೆ. ಶೇ. 99.9 ಪಾಸ್ ಆಗಿದ್ದಾರೆ. ತಾನು ಪರೀಕ್ಷೆ ಬರೆಯುವ ಬದಲು ಬೇರೆಯುವರು ಪರೀಕ್ಷೆ ಬರೆದ ಕಾರಣ ಒಬ್ಬ ವಿದ್ಯಾರ್ಥಿಯನ್ನು ಫೇಲು ಮಾಡಲಾಗಿದೆ.