ಎಸ್ ಡಿಪಿಐ ಕಚೇರಿಗಳಿಗೆ ದಾಳಿ

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಕೇಸ್ ಸಂಬಂಧಿಸಿ ಕೋರ್ಟ್ ಸರ್ಚ್ ವಾರೆಂಟ್ ನೊಂದಿಗೆ ಬೆಂಗಳೂರಿನ ಮೂರು ಕಡೆ ಗಳಲ್ಲಿರುವ ಎಸ್ಡಿಪಿಐ ಕಚೇರಿಗಳಿಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಅಲ್ಲಿದ್ದ ಕಂಪ್ಯೂಟರ್ ಮತ್ತು ಇತರೆ ವಸ್ತುಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಸಿಸಿಬಿಯ ಎಸಿಪಿ ಜಗನ್ನಾಥ ರೈ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳು ಈ ದಾಳಿಯನ್ನು ನಡೆಸಿವೆ. ದಾಳಿ ನಡೆಸಿದ ಸಂದರ್ಭದಲ್ಲಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಿದ್ದರು. ಕಚೇರಿ ಯಲ್ಲಿದ್ದ ಕಡತಗಳನ್ನು ಪರಿಶೀಲಿಸಿದ ತಂಡ ಎಲ್ಲವನ್ನೂ ತಮ್ಮ ವಶಕ್ಕೆ ಪಡೆದು ಕೊಂಡಿ ದ್ದಾರೆ

ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಎಸ್ಡಿಪಿಐ ಕೈವಾಡ ಇರುವ ಬಗ್ಗೆ ಆರೋಪಗಳು ಕೇಳಿದ್ದವು. ಈ ಹಿನ್ನೆಲೆಯಲ್ಲಿ ಸರ್ಚ್ ವಾರೆಂಟ್ ಪಡೆದ ಸಿಸಿಬಿ ತಂಡ ಹಲಸೂರು ಗೇಟ್ ಸಮೀಪದ ಎಸ್ಡಿಪಿಐ ಕೇಂದ್ರ ಕಚೇರಿ, ಡಿಜೆಹಳ್ಳಿ, ಕೆಜೆಹಳ್ಳಿ ಎಸ್ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿತ್ತು.

 
 
 
 
 
 
 
 
 
 
 

Leave a Reply