ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ನಸುಕಿನಲ್ಲಿ ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು, 11 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಳಗಿನ ಜಾವ ಸರಿಸುಮಾರು 4:30ಕ್ಕೆ ಈ ದುರಂತ ಸಂಭವಿಸಿದೆ.
ಟೆಂಪೋ ಟ್ರ್ಯಾಕ್ಸ್ ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಲಾರಿ ಬೆಂಗಳೂರು ಕಡೆಯಿಂದ ತೆರಳಿತ್ತಿತ್ತು. ಟೆಂಪೋ ಟ್ರ್ಯಾಕ್ಸ್ ನಲ್ಲಿ 20 ಜನ ತೆರಳುತ್ತಿದ್ದರು. ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದ್ದು, ಕ್ರೂಸರ್ ನಲ್ಲಿದ್ದವರೆಲ್ಲಾ ರಾಯಚೂರು ಜಿಲ್ಲೆಯ ಕೂಲಿ ಕಾರ್ಮಿಕರು ಎಂದು ತಿಳಿದುಬಂದಿದೆ. ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು, ಇಬ್ಬರು ಮಕ್ಕಳು ಸೇರಿ ಒಟ್ಟು 9 ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. 11 ಜನ ಗಾಯಾಳುಗಳನ್ನ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.