ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ಅಮಾನತುಗೊಂಡಿದ್ದ ನೌಕರರು ಮತ್ತೆ ಕರ್ತವ್ಯಕ್ಕೆ ಹಾಜರು

ಬೆಂಗಳೂರು: ಕೊರೊನಾ ಎರಡನೇ ಅಲೆಯ ಕಠಿಣ ಪರಿಸ್ಥಿತಿಯಲ್ಲಿ ಬೆಡ್ ಬ್ಲಾಕಿಂಗ್ ಪ್ರಕರಣ ರಾಜ್ಯದಲ್ಲಿ ಸಂಚಲನವನ್ನು ಸೃಷ್ಠಿಸಿತ್ತು.ಸಂಸದ ತೇಜಸ್ವಿ ಸೂರ್ಯ ಮತ್ತು ಮೂವರು ಶಾಸಕರು ಮೇ 4ರಂದು ಕೋವಿಡ್ ವಾರ್ ರೂಂ ಮೇಲೆ ದಾಳಿ ನಡೆಸಿದ ನಂತರ ಅಮಾನತುಗೊಂಡಿದ್ದ 17 ಮಂದಿ ಮುಸ್ಲಿಂ ನೌಕರರು ಇಂದಿನಿಂದ ಮತ್ತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

ಬಿಬಿಎಂಪಿಯಲ್ಲಿ ಹಾಸಿಗೆ ಬ್ಲಾಕಿಂಗ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ್ದ ಸಂಸದ ಮತ್ತು ಶಾಸಕರು ಈ ನೌಕರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ವಾರ್ ರೂಂನಲ್ಲಿ 212 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಮುಸ್ಲಿಂ ಸಮುದಾಯದ ಒಬ್ಬರು ಮಾತ್ರ ಹಾಸಿಗೆ ನಿಯೋಜನೆ ವಿಭಾಗದಲ್ಲಿದ್ದರು.

 ಕ್ರಿಸ್ಟಲ್ ಇನ್ಫೋ ಸಿಸ್ಟಂ ಅಂಡ್ ಸರ್ವೀಸಸ್ ಎಂಬ ಹೊರಗುತ್ತಿಗೆ ಸಂಸ್ಥೆ ಈ ನೌಕರರನ್ನು ಬಿಬಿಎಂಪಿಗೆ ಪೂರೈಸಿತ್ತು.ಈ ಸಂಸ್ಥೆಯ ಅಧಿಕಾರಿಗಳು, ಕೋವಿಡ್ ದಕ್ಷಿಣ ವಲಯ ವಾರ್ ರೂಂನ ಉಸ್ತುವಾರಿ, ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಅವರನ್ನು ಶನಿವಾರ ಭೇಟಿ ಮಾಡಿದ್ದು, ‘ಈ ಮುಸ್ಲಿಂ ನೌಕರರು ಹಾಸಿಗೆ ಬ್ಲಾಕಿಂಗ್ ದಂಧೆಯಲ್ಲಿ ಭಾಗಿಯಾಗಿಲ್ಲ. ಇವರನ್ನು ಮರುನೇಮಕ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿ ಕೊಂಡಿದ್ದಾರೆ. ಹಾಗಾಗಿ ಈ 17 ಜನ ಮರು ನೇಮಕರಾಗಿದ್ದಾರೆ.

 
 
 
 
 
 
 
 
 
 
 

Leave a Reply