ಬೆಂಗಳೂರು: ನಗರದ 36ನೇ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಇಂದು ಬೆಳಗ್ಗೆ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅಧಿಕಾರ ಹಸ್ತಾಂತರಿಸಿದರು. ಕರೊನಾ ಸೋಂಕಿನಿಂದ ಮೃತಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸ್ಮರಿಸಿದ ನೂತನ ಪೊಲೀಸ್ ಆಯುಕ್ತರು, ‘ಇಂದು ನಾನು ಬೆಂಗಳೂರು ನಗರ ಪೊಲೀಸ್ ಆಯುಕ್ತನಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಸರ್ಕಾರ ಕೊಟ್ಟ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ’ ಎಂದರು.
ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿ ಮಾತನಾಡಿದ ಕಮಲ್ ಪಂತ್, ‘ಮಹಿಳೆಯರು, ಮಕ್ಕಳು, ವೃದ್ಧರ ರಕ್ಷಣೆ ನಮ್ಮ ಹೊಣೆ’ ಎಂದರು. ‘ಸೈಬರ್ ಕ್ರೈಂ, ಮಾದಕವಸ್ತು ಮಾರಾಟ ಜಾಲ ಮತ್ತು ರೌಡಿಗಳ ಮೇಲೆ ಹದ್ದಿನ ಕಣ್ಣಿಡಲಾಗುವುದು’ ಎನ್ನುವ ಮೂಲಕ ಪಾತಕಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕುವುದಾಗಿ ಎಚ್ಚರಿಸಿದರು. ನಗರದ ಜಂಟಿ ಪೊಲೀಸ್ ಆಯುಕ್ತರು, ಡಿಸಿಪಿಗಳು ಉಪಸ್ಥಿತರಿದ್ದರು.