ಭಾರತ್ ಜೋಡೋ ಯಾತ್ರೆ : ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿ ಚರ್ಚಿಸಿದ ಎಂ.ಎ. ಗಫೂರ್

 ಭಾರತ್ ಜೋಡೋ ಯಾತ್ರೆ ಜಿಲ್ಲೆಯ ತುರುವೇಕೆರೆಯಲ್ಲಿ ಸಾಗುತ್ತಿರುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆ ಹೆಜ್ಜೆ ಹಾಕಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಪಕ್ಷದ ಚಿಕ್ಕಮಗಳೂರು ಉಸ್ತುವಾರಿ ಎಂ.ಎ.ಗಫೂರ್ ಅವರೊಂದಿಗೆ ಮಾತಾಡಿದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಕುರಿತು ರಾಹುಲ್ ಗಾಂಧಿಯವರು ಹಲವು ಮಾಹಿತಿ ಪಡೆದುಕೊಂಡು ಚರ್ಚಿಸಿದರು ಎಂದು ಎಂ.ಎ. ಗಫೂರ್ ಹೇಳಿದ್ದಾರೆ.

 
 
 
 
 
 
 
 
 
 
 

Leave a Reply