ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಭರವಸೆಗಳ ಸಮಿತಿ ಸಭೆ

ಕರ್ನಾಟಕ ವಿಧಾನಸಭೆಯ ಭರವಸೆಗಳ ಸಮಿತಿ ಸಭೆ ಗುರುವಾರದಂದು ಬೆಂಗಳೂರಿನಲ್ಲಿ ನಡೆಯಿತು.ಶಾಸಕ ಶ್ರೀ ಕೆ. ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಲಸಂಪನ್ಮೂಲ ಮತ್ತು ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಚರ್ಚಿಸಲಾಯಿತು.

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಕರ್ನಾಟಕ ನೀರಾವರಿ ನಿಗಮ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಘೂಂಘೆ, ಕೃಷ್ಣ ಭಾಗ್ಯ ಜಲ ನಿಗಮ ಇದರ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚೀನಿ, ಕಾವೇರಿ ನೀರಾವರಿ ನಿಗಮ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply