ಬಿಬಿಎಂಪಿ ವತಿಯಿಂದ ನಡೆದ ಮೇಲ್ಸೇತುವೆ ಕಾರ್ಯದಲ್ಲಿ ಕಳಪೆ ಕಾಮಗಾರಿ ಕಂಡುಬಂದಿದ್ದು ಈಗಲೋ.. ಆಗಲೋ ಬೀಳುವ ಪರಿಸ್ಥಿತಿಯಲ್ಲಿದೆ.
ಅಪಾರ ಸಾವು ನೋವುಗಳು ಸಂಭವಿಸುವ ಮೊದಲು ಬಿಬಿಎಂಪಿ ಎಚ್ಚರಗೊಂಡು ಕೂಡಲೇ ಹೊಸ ಮೇಲ್ಸೇತುವೆಯನ್ನು ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ವತಿಯಿಂದ ಸಾಂಕೇತಿಕ ಧರಣಿ ನಡೆಸಲಾಯಿತು.
ಪ್ರತಿಭಟನೆ ಬಳಿಕ ಬಿಬಿಎಂಪಿ ಆಯುಕ್ತರಿಗೆ ದೂರು ನೀಡಿ, ಈ ವಿಷಯಕ್ಕೆ ಸಂಬಂಧಪಟ್ಟಂತೆ ಒಂದು ವಾರಗಳ ಗಡುವು ನೀಡಿದ್ದು, ಕ್ರಮಕೈಗೊಳ್ಳದಿದ್ದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಕಾನೂನು ಹೋರಾಟ ಮತ್ತು ಉಗ್ರ ಪ್ರತಿಭಟನೆಯನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯಾಧ್ಯಕ್ಷ ಡಾ.ರವಿ ಶೆಟ್ಟಿ ಬೈಂದೂರು ತಿಳಿಸಿದ್ದಾರೆ.