ನೇಣು ಬಿಗಿದ ಸ್ಥಿತಿಯಲ್ಲಿ ಬಾಡಿಬಿಲ್ಡರ್‌ ಶವ ಪತ್ತೆ!

ಐಟಿಸಿಟಿ ಬೆಂಗಳೂರಿನಲ್ಲಿ ಕೋಲಾರದ ಬಾಡಿ ಬಿಲ್ಡರ್‌ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕೆ ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಬಾಡಿ ಬಿಲ್ಡರ್‌ ಪತ್ತೆಯಾಗಿದ್ದಾರೆ.

ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ, ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಈ ಬಗ್ಗೆ ಅವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

 
 
 
 
 
 
 
 
 

Leave a Reply