ಶಾಲಾ ಕಾಲೇಜು ಪ್ರಾರಂಭಿಸುವ ಕುರಿತು ಇಂದು ಮುಖ್ಯಮಂತ್ರಿ ಬಿ.ಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಜೊತೆ ಸಭೆ

ಬೆಂಗಳೂರು: ವಿಶ್ವದೆಲ್ಲೆಡೆ ಕೊರೋನಾ ಹೆಚ್ಚುತ್ತಿರುವ ನಡುವೆಯೆ ರಾಜ್ಯದಲ್ಲಿ ಶಾಲಾ ಕಾಲೇಜು ಪ್ರಾರಂಭಿಸುವ ಕುರಿತು ಇಂದು ಮುಖ್ಯಮಂತ್ರಿ ಬಿ.ಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ ನೀಡಿರುವ ಸೂಚನೆಯಂತೆ ಶಾಲಾ ಕಾಲೇಜು ಮತ್ತೆ ಪ್ರಾರಂಭಿಸುವ ಬಗ್ಗೆ ಸಿ.ಎಂ ಇಂದು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿರುವ ಸಿಎಂ ಬಿ.ಎಸ್.ವೈ ಜಿಲ್ಲಾಡಳಿತದ ಅಭಿಪ್ರಾಯ ಪಡೆದು ಬಳಿಕ ಅಂತಿಮ ತೀರ್ಮಾನ ತೆಗೆದುಕೊಳ್ಳುಲ್ಲಿದ್ದಾರೆ.

ಸಭೆಯಲ್ಲಿ ಮೈಸೂರು, ಬಳ್ಳಾರಿ, ದಕ್ಷಿಣ ಕನ್ನಡ, ಧಾರವಾಡ, ಬೆಳಗಾವಿ,ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ಹಾಸನ ಜಿಲ್ಲೆಗಳ ಅಧಿಕಾರಿಗಳ ಜೊತೆ ಶಾಲಾ ಕಾಲೇಜು ಪ್ರಾರಂಭಿಸುವ ಕುರಿತು ಮಹತ್ವದ ವಿಷಯಗಳ ಬಗ್ಗೆ ಸಿಎಂ ಬಿ.ಎಸ್.ವೈ ಚರ್ಚಿಸಲ್ಲಿದ್ದಾರೆ.

 
 
 
 
 
 
 
 
 
 
 

Leave a Reply