ರಾಜ್ಯದಲ್ಲಿ ಯಾವ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ನವದೆಹಲಿ : ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರನ್ನು ಬದಲಿಸುವ ಯಾವುದೇ ಪ್ರಸ್ತಾಪವಿಲ್ಲ.ಇದು ಕೇವಲ ಕಾಲ್ಪನಿಕ, ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ.ಯಡಿಯೂರಪ್ಪ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಒಂದಿಬ್ಬರು ಮಾತನಾಡುತ್ತಿದ್ದಾರೆ. ಇನ್ಮುಂದೆ ಈ ಬಗ್ಗೆ ಬಹಿರಂಗವಾಗಿ ಯಾರೂ ಹೇಳಿಕೆ ನೀಡಬಾರದು.ಏನೇ ಸಮಸ್ಯೆಯಿದ್ದರೂ ಪಕ್ಷದ ವೇದಿಕೆಯಲ್ಲೇ ಚರ್ಚೆ ಮಾಡಬೇಕು ಎಂದು ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply