ಕರ್ನಾಟಕಕ್ಕೆ ಬಸವರಾಜ ಬೊಮ್ಮಾಯಿ ಸಾರಥ್ಯ

ಬಿ ಎಸ್ ಯಡಿಯೂರಪ್ಪ ಆಪ್ತನಿಗೆ ಒಲಿದ ಮುಖ್ಯಮಂತ್ರಿ ಪಟ್ಟ 

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆ. ಬಿ.ಎಸ್‌. ಯಡಿಯೂರಪ್ಪ ಅವರ ರಾಜೀನಾಮೆ ಯಿಂದ ತೆರವಾಗಿರುವ ಮುಖ್ಯಮಂತ್ರಿ ಹುದ್ದೆಗೆ ಹೊಸ ನಾಯಕನನ್ನು ಆಯ್ಕೆಮಾಡುವ ಪ್ರಕ್ರಿಯೆ ಆರಂಭವಾಗಿ, ನಗರದ ಕ್ಯಾಪಿಟಲ್‌ ಹೋಟೆಲ್‌ನಲ್ಲಿ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಯಿತು.  

ಮುಖ್ಯಮಂತ್ರಿ ಆಯ್ಕೆಗೆ ಪಕ್ಷದ ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಮತ್ತು ಕಿಶನ್‌ ರೆಡ್ಡಿ,  ಪಕ್ಷದ ರಾಜ್ಯ ಘಟಕದ ಉಸ್ತುವಾರಿಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿ.  

ಬುಧವಾರವೇ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭವೂ ನಡೆಯಲಿದೆ. ಲಿಂಗಾಯತ ಸಮುದಾಯದವರಿಗೇ ಮುಖ್ಯಮಂತ್ರಿ ಹುದ್ದೆ ನೀಡುವ ತೀರ್ಮಾನಕ್ಕೆ ಬಿಜೆಪಿ ಹೈಕಮಾಂಡ್‌ ಬದ್ದವಾಗಿದ್ದುದು ಈ ಮೊದಲೇ ಕಂಡು ಬಂದಿತ್ತು. 

 
 
 
 
 
 
 
 
 
 
 

Leave a Reply