ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಗೃಹ ಸಚಿವರು, ಇಲಾಖೆ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಸಿಎಂ, ಬಿಜೆಪಿ ಹಾಗೂ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಹೂಡಿರುವ ಹಳೆಯ ಸುಳ್ಳು ಕೇಸ್ಗಳನ್ನು ಹಿಂಪಡೆಯಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೋರಿದ್ದಾರೆ.
ಬಿಜೆಪಿ, ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಮಾತ್ರವಲ್ಲ ರೈತರು ಹಾಗೂ ಕನ್ನಡಪರ ಚಳವಳಿಗಾರರ ವಿರುದ್ಧದ ಮೊಕದ್ದಮೆ ಹಿಂಪಡೆಯುವ ಕುರಿತು ಮುಖ್ಯಮಂತ್ರಿ ಜತೆಗೆ ಚರ್ಚಿಸಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕೆ.ಎಸ್.ಈಶ್ವರಪ್ಪ ತಮ್ಮ ನೋವು ನೋಡಿಕೊಂಡಿದ್ದು, ಪ್ರಚೋದನೆ ಅಥವಾ ವಿವಾದವೆಂದು ದೊಡ್ಡದು ಮಾಡಬೇಕಾಗಿಲ್ಲ ಎಂದು ಸಮರ್ಥಿಸಿಕೊಂಡರು.
ನೂತನ ಸರ್ಕಾರದ ಧ್ಯೇಯ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಸಭೆ ಕರೆಯಲಾಗಿತ್ತು. ಪೊಲೀಸರು ಇನ್ನಷ್ಟು ಜನಪರ ಹಾಗೂ ದಕ್ಷವಾಗಿ ಕೆಲಸ ಮಾಡಬೇಕು. ಸುಭಿಕ್ಷ ರಾಜ್ಯಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಪೂರ್ಣ ಬಿಗಿಯಾಗಿರುವುದು ಮುಖ್ಯ, ಅದಕ್ಕೆ ಆದ್ಯತೆ ನೀಡಲಾಗುವುದು. ದಕ್ಷ, ಅನುಭವಿ ಮತ್ತು ಪ್ರಾಮಾಣಿಕ ಸಚಿವ ಆರಗ ಜ್ಞಾನೇಂದ್ರ ಅವರು ಇಲಾಖೆಗೆ ಇನ್ನಷ್ಟು ಚೈತನ್ಯ ತುಂಬುವ ಉತ್ಸಾಹದಲ್ಲಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.