ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಉಡುಪಿಗೆ 

ಉಡುಪಿ: ಸಿ.ಎಂ ಬಿ ಎಸ್ ಯಡಿಯೂರಪ್ಪ ಅವರು ಜನವರಿ 18 ಮತ್ತು 19 ರಂದು ಉಡುಪಿ ಜಿಲ್ಲೆಯ ಪ್ರವಾಸ ಮಾಡಲಿದ್ದಾರೆ.

ಮುಖ್ಯಮಂತ್ರಿಯವರು, 18ರ ಸೋಮವಾರ ಮಧ್ಯಾಹ್ನ 4.30 ಕ್ಕೆ ಹೆಲಿಕಾಪ್ಟರ್ ಮೂಲಕ ಆದಿ ಉಡುಪಿ ಹೆಲಿಪ್ಯಾಡ್ ಗೆ ಆಗಮಿಸಲಿದ್ದು, ಸಂಜೆ 5 ಗಂಟೆಗೆ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಸಿರುವ ಪರ್ಯಾಯದ ಪಂಚ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ತದನಂತರ ಸಂಜೆ 6.30ಕ್ಕೆ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಜನವರಿ 19ರಂದು ಬೆಳಿಗ್ಗೆ 9.25 ಕ್ಕೆ ಹೆಜಮಾಡಿ ಕೋಡಿಯಲ್ಲಿನ ಮೀನುಗಾರಿಕೆ ಬಂದರು ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, 

ಬೆಳಿಗ್ಗೆ 11.30 ಕ್ಕೆ ಕುಂಭಾಸಿ ಆನೆಗುಡ್ಡೆ ಗಣಪತಿ ದೇವಸ್ಥಾನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 1.30 ಕ್ಕೆ ಕುಂದಾಪುರ ನ್ಯೂ ಮೆರಿಡಿಯನ್ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ಮರಳಳಿದ್ದಾರೆ.

 
 
 
 
 
 
 
 
 
 
 

Leave a Reply