ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯ ಕುರಿತು ನಾಳೆಯೇ ತೀರ್ಮಾನ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಾಳೆ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಸಚಿವರ ಸಭೆ ನಾಳೆ ಕರೆಯಲಾಗಿದ್ದು, ಸಭೆಯಲ್ಲಿ ಎಲ್ಲಾ ಸಚಿವರ ಅಭಿಪ್ರಾಯ ಪರಿಗಣಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.ಮೇ 23ರಂದು ತೀರ್ಮಾನ ತೆಗೆದುಕೊಳ್ಳುವುದಾಗಿ ಸಿಎಂ ಈ ಹಿಂದೆ ಪ್ರಕಟಿಸಿದ್ದರು.ಸದ್ಯ ರಾಜ್ಯದಲ್ಲಿ ಒಂದು ವಾರ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಿದೆ.

 
 
 
 
 
 
 
 
 
 
 

Leave a Reply