ಗಣೇಶ ಚತುರ್ಥಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಾಶಯ

ಬೆಂಗಳೂರು :‌ ಕೊರೊನಾ ಭೀತಿಯ ನಡುವೆ ರಾಜ್ಯದಲ್ಲಿ ಗಣೇಶ ಹಬ್ಬ ಎಲ್ಲರಲ್ಲೂ ಮನೆ ಮಾಡಿದ್ದು, ಗಣೇಶ ಚತುರ್ಥಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು ರಾಜ್ಯದ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹೃತ್ಪೂರ್ವಕ ಶುಭಕಾಮನೆಗಳು. ಜಗನ್ಮಾತೆ ಗೌರಿ ಎಲ್ಲರಿಗೂ ಸುಖ, ಶಾಂತಿ, ಆರೋಗ್ಯಗಳನ್ನು ಕರುಣಿಸಲಿ, ವರಸಿದ್ದಿ ವಿನಾಯಕನು ಎಲ್ಲರ ಸಂಕಷ್ಟಗಳನ್ನು ಅಭೀಷ್ಟಗಳನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಎಲ್ಲ ಸುರಕ್ಷತಾ ಕ್ರಮಗಳನ್ನು ಪಾಲಿಸಿಕೊಂಡು ಹಬ್ಬವನ್ನು ಆಚರಿಸೋಣ ಎಂದು ನಾಡಿನ ಜನತೆಗೆ ಹೇಳಿದ್ದಾರೆ.

 
 
 
 
 
 
 
 
 
 
 

Leave a Reply