ಕೊರೋನಾ ಕರ್ಫ್ಯೂ ಮಾರ್ಗಸೂಚಿ – ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರನಾ ಸೋಂಕಿನ 2ನೇ ಅಲೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸೋಮವಾರ 14 ದಿನಗಳ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಅದಕ್ಕನುಗುಣವಾಗಿ ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕೊವಿಡ್ ಸೋಂಕು ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಯ ಸರ್ಕಾರಿ ಆದೇಶ ಹೊರಡಿಸಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ಹೊರಡಿಸಿರುವ ಈ ಮಾರ್ಗಸೂಚಿಯು ಏಪ್ರಿಲ್ 27ರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಹೊಸ ಮಾರ್ಗಸೂಚಿ ಜಾರಿಯಲ್ಲಿರುತ್ತದೆ. 

ಈ 14 ದಿನ ಲಭ್ಯವಿರುವ ಸೇವೆಗಳು ಮತ್ತು ನಿಷೇಧಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

 ಸೀಮಿತ ಅವಧಿಯಲ್ಲಿ ಅಗತ್ಯ ಸೇವೆಗೆ ಅವಕಾಶ

• ಈ ಎಲ್ಲಾ ದಿನಗಳಲ್ಲಿ ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯಸೇವೆಯ ಅಂಗಡಿಗಳನ್ನು ಅಂದರೆ ದಿನಸಿ, ಹಣ್ಣು ತರಕಾರಿ, ಮೀನು ಮಾಂಸ ಅಂಗಡಿ ತೆರೆಯಬಹುದು. 

• ಮದ್ಯಂದಗಡಿಗಳಿಗೂ ಬೆಳಗ್ಗೆ 6ರಿಂದ 10ಗಂಟೆವರೆಗೆ ಮಾತ್ರ ತೆರುಯಲು ಅವಕಾಶವಿದೆ.ಬಾರ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಸೀಮಿತ

• ಕೃಷಿ ಸಂಬಂಧಿಸಿದ ಚಟುವಟಿಕೆಗೆ ಯಾವುದೇ ನಿರ್ಬಂಧವಿಲ್ಲ

• ಬ್ಯಾಂಕ್, ಇ-ಕಾಮರ್ಸ್ ಸೇವೆಗಳಿಗೆ ನಿರ್ಬಂಧ ಇರುವುದಿಲ್ಲ

• ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ದರ್ಶಿನಿಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ

ಏನೇನೆಲ್ಲಾ ಬಂದ್:

• ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳು

• ಸಿನಿಮಾ ಹಾಲ್,ಶಾಪಿಂಗ್ ಮಾಲ್, ಜಿಮ್, ಯೋಗ ಕೇಂದ್ರ, ಸ್ವಾ ಮನರಂಜನಾ ಕೇಂದ್ರ ಸಮುದಾಯ ಭವನಗಳು ಸ್ಟೇಡಿಯಂ, ಆಟದ ಮೈದಾನ, ಕ್ರೀಡಾ ಸಂಕೀರ್ಣ, ಜಿಮ್‌ಗಳು

ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು

    • ಮದುವೆ ಕಾರ್ಯಕ್ರಮದಲ್ಲಿ 50 ಜನರು ಮಾತ್ರ ಪಾಲ್ಗೊಳ್ಳಬಹುದು.

    • ಅಂತ್ಯಕ್ರಿಯೆಯಲ್ಲಿ ಕೇವಲ ಐವರು ಮಾತ್ರ ಭಾಗಿಯಾಗುವ ಅವಕಾಶ. ಇದನ್ನು ಕಟ್ಟುನಿಟ್ಟಾಗಿ ಗಮನಿಸಲಾಗುವುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

• ಸಾಮಾಜಿಕ, ಧಾರ್ಮಿಕ, ಕ್ರೀಡಾ ಮನರಂಜನಾ, ಸಾಂಸ್ಕೃತಿಕ, ರಾಜಕೀಯ ಚಟುವಟಿಕೆಗೆ ಸಂಪೂರ್ಣ ನಿರ್ಬಂಧ

• ದೇವಸ್ಥಾನ, ಮಸೀದಿ, ಚರ್ಚ್‌ಗಳಿಗೆ ಜನರು ಪ್ರವೇಶಿಸುವಂತಿಲ್ಲ.ಅರ್ಚಕರು ಮಾತ್ರ ಸಂಪ್ರದಾಯದಂತೆ ಸರಳ ಪೂಜೆ ಮಾಡಬಹುದು.

 ಸಂಚಾರದ ಕುರಿತಾದ ನಿಯಮಗಳು

• ಏರ್‌ಪೋರ್ಟ್‌, ಬಸ್, ಟ್ಯಾಕ್ಸಿಗಳಿಗೆ ಷರತ್ತುಬದ್ಧ ಅವಕಾಶವಿದ್ದು, ಟ್ರಾವೆಲ್ ದಾಖಲಾತಿ, ಟಿಕೆಟ್ ತೋರಿಸುವುದು ಕಡ್ಡಾಯ.

• ತುರ್ತು ಸೇವೆಗೆ ಮಾತ್ರ ಆಟೋ, ಟ್ಯಾಕ್ಸಿಗೆ ಅವಕಾಶ ನೀಡಲಾಗಿದೆ. 

• ಮೇ 12ರವರೆಗೆ ಮೆಟ್ರೋ ಸಂಚಾರ ಸಂಪೂರ್ಣ ಬಂದ್ – ಅಂತಾರಾಜ್ಯವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ

• ಅಂತರ್ ಜಿಲ್ಲಾ ಅಂತರ್ ರಾಜ್ಯ ತುರ್ತು ಸೇವೆಗೆ ಮಾತ್ರ ಅವಕಾಶ

• ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಚಾರಕ್ಕೆ ಅವಕಾಶವಿದೆ, ಅಡ್ಮಿಷನ್ ಟಿಕೆಟ್ ತೋರಿಸಿ ಸಂಚರಿಸಬಹುದು.

• ಆಟೋ, ಟ್ಯಾಕ್ಸಿಯಲ್ಲಿ ವಿದ್ಯಾರ್ಥಿಗಳು ಸಂಚರಿಸಲು ಅನುಮತಿಯಿದೆ.

ಉದ್ಯೋಗ ವಿಚಾರ

• ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಯಾವುದೇ ನಿರ್ಬಂಧವಿಲ್ಲ

• ಕೈಗಾರಿಕೆಗಳಲ್ಲಿ ಕೆಲಸಕ್ಕೆ ತೆರಳುವವರು, ರಾತ್ರಿ ಪಾಳಿ ಕೆಲಸಕ್ಕೆ ಹೋಗುವವರು ಐಡಿ ತೋರಿಸಬೇಕು

• ನ್ಯಾಯಬೆಲೆ ಅಂಗಡಿ, ಆಹಾರ, ದಿನಸಿ, ಹಣ್ಣು ತರಕಾರಿ, ಡೇರಿ, ಹಾಲಿನ ಬೂತ್, ಮೀನು, ಮಾಂಸ ಮಾರಾಟ ಇರುತ್ತೆ

• ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಠ ಮಟ್ಟದ, ಅಗತ್ಯ ಪ್ರಮಾಣದ ಸಿಬ್ಬಂದಿ ಮಾತ್ರ ಕಚೇರಿಗೆ ಹಾಜರಾಗಬೇಕು. ಉಳಿದವರಿಗೆ ಮನೆಯಿಂದಲೇ ಕೆಲಸಕ್ಕೆ ವ್ಯವಸ್ಥೆ ಮಾಡಬೇಕು – ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಸಾಮಾನ್ಯ ಕೆಲಸಕ್ಕೆ ಉಳಿದ 50ರಷ್ಟು ಸಿಬ್ಬಂದಿ ಕೊವಿಡ್ ಡ್ಯೂಟಿಗೆ ಹಾಜರಾಗಬೇಕು

• ರಾಜ್ಯದ ಎಲ್ಲ ಕೋರ್ಟ್‌ಗಳ ಬಗ್ಗೆ ಹೈಕೋರ್ಟ್‌ನಿಂದ ನಿರ್ಧಾರ

• ಆರೋಗ್ಯ ವೈದ್ಯಕೀಯ ಶಿಕ್ಷಣ, ಕಂದಾಯ, ಗೃಹ ಇಲಾಖೆ, ಅಗ್ನಿಶಾಮಕ ದಳ, ಕಾರಾಗೃಹ, ವಿಪತ್ತು ನಿರ್ವಹಣಾ ಸಿಬ್ಬಂದಿ, ಎಲ್ಲಾ ಡಿಸಿಗಳ ಕಚೇರಿ, ಬಿಬಿಎಂಪಿ ಸಿಬ್ಬಂದಿ, ಇತರೆ ಇಲಾಖೆಗಳ ಕೊವಿಡ್ ಸೇವಾ ಸಿಬ್ಬಂದಿಗೆ ಕೆಲಸಕ್ಕೆ ಹಾಜರಾಗಲು ಅವಕಾಶವಿದೆ.

 
 
 
 
 
 
 
 
 
 
 

Leave a Reply