ಚಿತ್ರದುರ್ಗ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದ್ದು ಖಾಸಗಿ ಟಿವಿ ವಾಹಿನಿಯೊಂದರ ಕ್ಯಾಮರಾಮ್ಯಾನ್ ಬಸವರಾಜ್ ಕೋಟಿ ಬಲಿಯಾಗಿದ್ದಾರೆ.
ಪಬ್ಲಿಕ್ ಟಿವಿ ಚಾನೆಲ್ನ ಕ್ಯಾಮರಾಮ್ಯಾನ್ ಆಗಿದ್ದ ಇವರು ಚಿತ್ರದುರ್ಗ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರು. ಮೂಲತಃ ಧಾರವಾಡ ಮೂಲದ ಬಸವರಾಜ್ ಕೋಟಿಗೆ 10 ದಿನಗಳ ಹಿಂದೆ ಕರೊನಾ ಸೋಂಕು ತಗುಲಿತ್ತು. ಅಂದಿನಿಂದ ಚಿಕಿತ್ಸೆ ಪಡೆಯುತ್ತಿದ್ದರು.ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.