ಹಬ್ಬಗಳ ಆಚರಣೆಗೆ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಅಬ್ಬರ ಹೆಚ್ಚುತ್ತಿರುವ ಹಿನ್ನಲೆ ಸೋಂಕು ನಿಯಂತ್ರಣಕ್ಕೆ ಸರ್ಕಾರ ಸಿದ್ಧಗೊಂಡಿದೆ. ಮುಂದಿನ ದಿನಗಳಲ್ಲಿ ಹಲವಾರು ಹಬ್ಬಗಳಿರುವ ಕಾರಣ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ.

ಮುಂಬರಲಿರುವ ಹೋಳಿ, ಗುಡ್ ಫ್ರೈಡೆ, ಯುಗಾದಿ, ಶಬ್ ಎ ಬರತ್ ಹಬ್ಬಗಳ ಸಂದರ್ಭದ ಜನತೆ ಗುಂಪುಗೂಡದಂತೆ ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆಗೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕ ಸ್ಥಳ, ಮೈದಾನ, ಮಾರ್ಕೆಟ್ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ಸಾಮೂಹಿಕ ಆಚರಣೆ ನಿರ್ಬಂಧ ಹೇರಲಾಗಿದೆ.ಸರ್ಕಾರದ ಆದೇಶ ಉಲ್ಲಂಘಿಸಿದಲ್ಲಿ ಎಪಿಡಮಿಕ್ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ.

 
 
 
 
 
 
 
 
 
 
 

Leave a Reply