ಮಗಳ ಆತ್ಮಹತ್ಯೆ ಸುದ್ದಿ ಕೇಳಿ ಪ್ರಾಣ ಬಿಟ್ಟ ತಂದೆ: ಅಪ್ಪಂದಿರ ದಿನ ನಡೆದ ಹೃದಯ ವಿದ್ರಾವಕ ಘಟನೆ

ಮಂಡ್ಯ : ಇಂದು ವಿಶ್ವದಾದ್ಯಂತ ಅಪ್ಪಂದಿರ ದಿನದ ಸಂಭ್ರಮ, ತಂದೆ ಮಕ್ಕಳು ಖುಷಿಯಾಗಿರಬೇಕಾದ ದಿನ. ಆದರೆ ಈ ದಿನ ಮಗಳ ಆತ್ಮಹತ್ಯೆಯಿಂದ ನೊಂದ ತಂದೆಯೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದಲ್ಲಿ ನಡೆದಿದೆ. 

ರಾಜು (65) ಸಾವಿಗೀಡಾದ ತಂದೆ, ಪಿಯುಸಿ ಕಾಲೇಜು ಸೇರಿಸುವ ವಿಚಾರದಲ್ಲಿ ತಂದೆಯ ಜೊತೆ ಮುನಿಸಿಕೊಂಡಿದ್ದ ಮಗಳು ಬಾಂಧವ್ಯ (17) ಬೆಳಗಿನ ಜಾವ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಮಗಳ ಸಾವಿನ ಸುದ್ದಿ ತಿಳಿದ ತಂದೆ ರಾಜು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply