ಕರ್ನಾಟಕದಲ್ಲಿ ಜನತಾ ಕರ್ಫ್ಯೂ-14 ದಿನ ಕಂಪ್ಲೀಟ್ ಲಾಕ್

ಬೆಂಗಳೂರು: ನಾಳೆ ಏ.27ರ ರಾತ್ರಿಯಿಂದ ಮುಂದಿನ 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದ್ದು ಕೊರೋನಾ ಸೊಂಕು ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ ಈ ಕ್ರಮ ಕೈಗೊಂಡಿದೆ.

ಏ.27ರಿಂದ 14 ದಿನಗಳವರೆಗೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಇಂದು ಕೊರೋನಾ ಎರಡನೇ ಅಲೆ ನಿಯಂತ್ರಣ ಸಂಬಂಧ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಈ ಕೋವಿಡ್ ಸೋಂಕು ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಮಹಾರಾಷ್ಟ್ರ ಮೀರಿಸಿ, ಬೆಂಗಳೂರು ಸುತ್ತಾ ಮುತ್ತಾ ಹೆಚ್ಚು ಹರಡುತ್ತಿದೆ. ಹೀಗಾಗಿ ಸಚಿವ ಸಂಪುಟ ಸದಸ್ಯರು, ತಜ್ಞರ ಜೊತೆಗೆ ಚರ್ಚಿಸಿ, ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.ಕೋವಿಡ್ ತಡೆಯೋದಕ್ಕೆ ಬಿಗಿ ಕ್ರಮವಾಗಿ ನಾಳೆ ರಾತ್ರಿಯಿಂದ 14 ದಿನ ಬಿಗಿ ಕ್ರಮ ಜಾರಿಯಲ್ಲಿರುತ್ತದೆ. ಇದು ರಾಜ್ಯಾಧ್ಯಂತ ಜಾರಿಯಲ್ಲಿ ಇರಲಿದೆ ಎಂದು ಸ್ಪಷ್ಟಪಡಿಸಿದರು.

ಏ.27ರಿಂದ ಮೇ.9ರ ವರೆಗೆ ಒಟ್ಟು 14 ದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು ಆ ನಂತರ ಕಟ್ಟುನಿಟ್ಟಿನ ಲಾಕ್​ಡೌನ್ ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೇ ರಾಜ್ಯದ್ಯಂತ ಉಚಿತ ಲಸಿಕೆ ವಿತರಣೆಗೆ ನಿರ್ಧಾರ ಮಾಡಲಾಗಿದೆ. ಕೃಷಿ ಹಾಗೂ ಕೈಗಾರಿಕಾ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

 
 
 
 
 
 
 
 
 
 
 

Leave a Reply