ಉಡುಪಿ : ಶ್ರೀಕೃಷ್ಣಮಠಕ್ಕೆ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ಆಗಮಿಸಿ ದೇವರ ದರ್ಶನ ಪಡೆದು ಅದಮಾರು ಪರ್ಯಾಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.
ಜಿಲ್ಲಾಧಿಕಾರಿ ಕೂರ್ಮ ರಾವ್, ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ ಭಟ್, ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀಕೃಷ್ಣ ಸೇವಾ ಸಮಿತಿಯ ವೈ.ಎನ್.ರಾವ್,ಮಠದ ಪಿ.ಆರ್.ಓ ಕಡೆಕಾರ್ ಶ್ರೀಶ ಭಟ್ ಮೊದಲಾದವರು ಉಪಸ್ಥಿತರಿದ್ದರು.