ಜನರು ಮೈಮರೆತ್ರೆ ​ಮಗದೊಮ್ಮೆ ಲಾಕ್ ಡೌನ್? ​~ಸಿಎಂ ಬಿಎಸ್ ವೈ ಖಡಕ್ ​ಸೂಚನೆ

ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಅನ್ ಲಾಕ್ ಘೋಷಣೆ ಮಾಡಿದೆ. ಆದರೆ 3 ನೇ ಅಲೆ ಆತಂಕ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಾ ಇದೆ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನತೆಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ದೇಶದ ಮೊದಲ ಮೇಕ್ ಶಿಫ್ಟ್ ಆಸ್ಪತ್ರೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಈಗಾಗಲೇ ರಾಜ್ಯದಲ್ಲಿ 2 ಬಾರಿ ಲಾಕ್ ಡೌನ್ ಮಾಡಲಾಗಿತ್ತು. ಈಗ ಓಪನ್ ಮಾಡಲಾಗಿದೆ. ಜನರು ಮೈಮರೆತ್ರೆ ಮತ್ತೆಲಾಕ್ ಡೌನ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜನರು ಎಚ್ಚರಿಕೆ ವಹಿಸಿ ಮಾಸ್ಕ್ ಧರಿಸಿ, ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿ, ಮತ್ತೊಮ್ಮೆ ಕೋವಿಡ್ ಹರಡದಂತೆ ಎಚ್ಚರಿಕೆ ವಹಿಸದಿದ್ದರೆ ಮತ್ತೊಮ್ಮೆ ಲಾಕ್ ಡೌನ್ ಮಾಡುವ ಪ್ರಸಂಗ ಬರಲಿದೆ ಎಂದರು.

 
 
 
 
 
 
 
 
 
 
 

Leave a Reply