ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಮಿನಿ ಲಕ್ಷುರಿ ಬಸ್, ರಸ್ತೆಯ ಪಕ್ಕದಲ್ಲಿನ ವಿದ್ಯುತ್ ಕಂಬಕ್ಕೆ ತಾಗಿದ ಪರಿಣಾಮ ಬಸ್ ಗೆ ಬೆಂಕಿ ಹೊತ್ತಿಕೊಂಡು ಇದರಿಂದ ಇಬ್ಬರು ಸುಟ್ಟು ಸಾವನ್ನಪ್ಪಿದ ಘಟನೆ ಬುಧವಾರದಂದು ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಸ್ ನಲ್ಲಿದ್ದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಅವರನ್ನು ಬೆಳಗಾವಿ ಜಿಲ್ಲೆಯ ಯಾದವಾಡ ಗ್ರಾಮದ ಈರವ್ವ ಗಾಣಿಗೇರ (70), ಅಣ್ಣವ್ವ ಗಾಣಿಗೇರ (58) ಎಂದು ಗುರುತಿಸಲಾಗಿದೆ. ಅಥಣಿ ತಾಲೂಕಿನ ಚಮಕೇರಿ ಗ್ರಾಮದ ಮದುವೆಗೆ ಹೋಗಿದ್ದು, ಅಲ್ಲಿಂದ ಯಾದವಾಡ ಗ್ರಾಮಕ್ಕೆ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಇಬ್ಬರು ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ, ಬೆಂಕಿ ಹತ್ತಿಕೊಳ್ತಿದ್ದಂತೆ ಬಸ್ ನಿಂದ ಕೆಳಗಿಳಿದು ಕೆಲವರು ಪ್ರಾಣ ಉಳಿಸಿಕೊಂಡ್ಡಿದ್ದಾರೆ.ಹೊಲದಲ್ಲಿ ಇದ್ದ ವಿದ್ಯುತ್ ಕಂಬಕ್ಕೆ ಬಸ್ ಗುದ್ದಿದೆ ಎನ್ನಲಾಗಿದೆ. ಲೋಕಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.