ಉಡುಪಿಯಲ್ಲಿ 50ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರ

ಉಡುಪಿ: ಭಾನುವಾರದಂದು ಉಡುಪಿ ಜಿಲ್ಲಾ ಬೌದ್ಧ ಮಹಾಸಭಾ ವತಿಯಿಂದ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್‌ರವರ 64ನೇ ದಮ್ಮ ಚಕ್ರ ಪ್ರವರ್ತನಾ ದಿನಾಚರಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ
ಜಿಲ್ಲೆಯ ಸುಮಾರು 50ಕ್ಕೂ ಅಧಿಕ ದಲಿತರು ಭೌದ್ಧಧರ್ಮಕ್ಕೆ ಮತಾಂತರಗೊಂಡಿದ್ದಾರೆ.

ಮೈಸೂರಿನ ಕೊಳ್ಳೆಗಾಲ ಜೀವನ ಬುದ್ಧ ವಿಹಾರದಿಂದ ಆಗಮಿಸಿದ ಸುಗತಪಾಲ ಭಂತೇಜಿ ಮತಾಂತರಗೊಂಡ ಬೌದ್ಧರಿಗೆ ಪ್ರಮಾಣವಚನ ಬೋಧಿಸಿದರು.ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಲ್ಲಿ ಹತ್ತನೇ ತರಗತಿಯಲ್ಲಿ ಮತ್ತು ಪದವಿ ಪೂರ್ವ ವಿದ್ಯಾಭ್ಯಾಸದಲ್ಲಿ ಅಧಿಕ ಅಂಕ ಗಳಿಸಿದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಹಾಯಧನ ನೀಡಿ ಅಭಿನಂದಿ ಸಲಾಯಿತು.

ಮುಖ್ಯ ಭಾಷಣ ಕಾರರಾಗಿ ಉಪನ್ಯಾಸಕ ಭಾಸ್ಕರ್ ವಿಟ್ಲ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು, ಬೌದ್ಧ ಧರ್ಮದ ವಿಚಾರಧಾರೆಗಳ ಕುರಿತು ತಿಳಿಸಿದರು. ದಲಿತ ಮುಖಂಡರಾದ ಸುಂದರ ಮಾಸ್ತರ್, ಮಂಜುನಾಥ್ ಗಿಳಿ ಯಾರು,
ನಾರಾಯಣ ಮಣೂರು, ಶೇಖರ್ ಹೆಜಮಾಡಿ, ಶೇಖರ ಹಾವಂಜೆ, ಶಂಭು ಮಾಸ್ಟರ್, ಪುಷ್ಪಾಕರ್, ಅಣ್ಣಪ್ಪನಕ್ರೆ, ಶ್ಯಾಮಸುಂದರ್ ತೆಕ್ಕಟ್ಟೆ, ಮಂಜುನಾಥ್ ವಿ., ಕೀರ್ತಿಕುಮಾರ್ ಪಡುಬಿದ್ರಿ, ವಿಠಲ ತೊಟ್ಟಂ,ಆನಂದ ಬ್ರಹ್ಮಾವರ, ರಾಘವೇಂದ್ರ ಬೆಳ್ಳೆ, ರಾಜೇಂದ್ರ ಬೆಳ್ಳೆ, ಭಾಸ್ಕರ್ ಮಾಸ್ತರ್ ಕುಂಜಿಬೆಟ್ಟು, ವಿಠಲ ಉಚ್ಚಿಲ.

ಶ್ಯಾಮ ರಾಜ್ ಬಿರ್ತಿ,ಗೋಪಾಲಕೃಷ್ಣ ಕುಂದಾಪುರ, ಮಂಜುನಾಥ ಬಾಳ್ಕುದ್ರು, ಸುರೇಶ ಬಾರ್ಕೂರು, ಕೃಷ್ಣ ಎಲ್‌ಐಸಿ,ಮುರಳೀಧರ್, ಪರಮೇಶ್ವರ್ ಉಪ್ಪೂರು, ಅಜಯ ಕುಮಾರ್, ರಮೇಶ್ ಮತ್ತು ರವೀಂದ್ರ ಬಂಟಕಲ್ಲು, ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply