ಏರೆಗ್ಲಾ ಪನಂದೆ ನಳಿನ್ ಕುಮಾರ್ ಯಡಿಯೂರಪ್ಪನಿ ಇಲ್ಲಗು ಕಡಬುಡುವೆರಾ…?

ಯಾರಿಗೂ ಹೇಳಬೇಡ ~ ನಳೀನ್ ಕುಮಾರ್ ಕಟೀಲ್ ಸ್ಪೋಟಕ ಆಡಿಯೋ ವೈರಲ್.

ಬೆಂಗಳೂರು : ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪಕೆಳಗಿಳಿಯುವುದು ನಿಶ್ಚಿತವಾಗಿದ್ದು ಹಿರಿಯ ನಾಯಕ ಜಗದೀಶ್ ಶೆಟ್ಟರ್, ಈಶ್ವರಪ್ಪ ಗ್ಯಾಂಗು ಸಂಪುಟದಿಂದ ಖಾಯಂ ಆಗಿ ಹೊರಬೀಳಲಿದೆ. ಈ ಸ್ಪೋಟಕ ಸಂಗತಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಂದಲೇ ಬಹಿರಂಗವಾಗಿದ್ದು ರಾಜ್ಯ ರಾಜಕಾರಣಕ್ಕೆ ರೋಚಕ ಟ್ವಿಸ್ಟ್ ದೊರೆತಿದೆ.

ತಮ್ಮ ಅಪ್ತರ ಬಳಿ ಮಾತುಕತೆ ನಡೆಸಿರುವ ನಳೀನ್ ಕುಮಾರ್ ಕಟೀಲ್ ಅವರು, ಈ ಸಂಗತಿಯನ್ನು ಬಹಿರಂಗಪಡಿಸಿರುವ ರೀತಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದೆಯಲ್ಲದೆ ಸಧ್ಯದಲ್ಲೇ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ ಎಂಬುದನ್ನು ಖಚಿತಪಡಿಸಿದಂತಾಗಿದೆ.

ಯಡಿಯೂರಪ್ಪ ಅವರ ಜಾಗಕ್ಕೆ ಮೂವರ ಪೈಕಿ ಒಬ್ಬರು ಬರಲಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಸುಳಿವು ನೀಡಿದ್ದಾರೆ. ತಮ್ಮ ಆಪ್ತರ ಬಳಿ ಕಟೀಲ್ ಅವರು ತುಳುವಿನಲ್ಲಿ ಮಾತನಾಡಿದ್ದು, ಯಾರಿಗೂ ಹೇಳಬೇಡ, ಶೆಟ್ಟರ್, ಈಶ್ವರಪ್ಪ ಮತ್ತವರ ಟೀಮು ಹೊರಬೀಳಲಿದ್ದು ಆನಂತರ ನಾವು ಹೇಳಿದಂತೆಯೇ ನಡೆಯಲಿದೆ.

ಯಾರೇ ಬಂದರೂ ನಮಗೆ ಬೇಕಾದವರೇ ಆಗಿರಲಿದ್ದು ಮೂರು ಜನರ ಹೆಸರು ಹೈಕಮಾಂಡ್ ಗಮನದಲ್ಲಿದೆ ಎಂದಿರುವ ನಳೀನ್ ಕುಮಾರ್ ಕಟೀಲ್, ಆ ಮೂಲಕ ನಾಯಕತ್ವ ಬದಲಾವಣೆಯಿಲ್ಲ ಎಂಬ ಯಡಿಯೂರಪ್ಪ ಅವರ ಆತ್ಮವಿಶ್ವಾಸಕ್ಕೆ ಬಿಗ್ ಶಾಕ್ ನೀಡಿದ್ದಾರೆ. 

 – ನಳಿನ್ ಕುಮಾರ್ ಪ್ರತಿಕ್ರಿಯೆ

 

 
 
 
 
 
 
 
 
 
 
 

Leave a Reply