ಲಾಕ್ ಡೌನ್ ಇಲ್ಲ, ಒಳಾಂಗಣ ಕಾರ್ಯಕ್ರಮಗಳಿಗೆ ನಿರ್ಬಂಧ – ಸಿಎಂ

ಬೆಂಗಳೂರು: ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಅಥವಾ ಲಾಕ್ ಡೌನ್ ಹೇರುವ ಯಾವುದೇ ಉದ್ದೇಶ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

 

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಡೆಸುತ್ತಿರುವ ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಮದುವೆ, ಬರ್ತ್ ಡೇ ಪಾರ್ಟಿ, ಮತ್ತಿತರ ಕಾರ್ಯಕ್ರಮಗಳು ಸೇರಿದಂತೆ ಎಲ್ಲಾ ರೀತಿಯ ಒಳಾಂಗಣ ಚಟುವಟಿಕೆಗಳಿಗೆ ಕಠಿಣ ಮಾರ್ಗಸೂಚಿ ರಚಿಸಲಾಗುತ್ತದೆ. ಆದರೆ, ಹೊರಾಂಗಣ ಕಾರ್ಯಕ್ರಮಗಳಿಗೆ ಹೆಚ್ಚಿನ ನಿರ್ಬಂಧಗಳಿಲ್ಲ ಎಂದು ಸ್ಪಷ್ಟಪಡಿಸಿದರು.

 ನಮ್ಮ ಗಮನವು ನಾಲ್ಕು ಗೋಡೆಗಳ ಒಳಗೆ ನಡೆಯುವ ಹೆಚ್ಚು ಜನ ಸೇರುವ ದೊಡ್ಡ ಪಾರ್ಟಿಗಳನ್ನು ನಿಯಂತ್ರಿಸುವುದರ ಮೇಲೆ ಇರಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರ ಸಂಖ್ಯೆ ಸೇರಿದಂತೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸುವ ಯಾವುದೇ ಘಟನೆಗಳನ್ನು ಗಂಭಿರವಾಗಿ ಪರಿಗಣಿಸಲಾಗುತ್ತದೆ. ಮಾಸ್ಕ್ ಧರಿಸುವುದು ಕಡ್ಡಾಯ ನಿಯಮ ಬಿಟ್ಟರೆ ಹೊರಾಂಗಣ ಚಟುವಟಿಕೆಗಳಿಗೆ ಹೆಚ್ಚಿನ ನಿರ್ಬಂಧಗಳಿಲ್ಲ ಎಂದು ತಿಳಿಸಿದರು.

 
 
 
 
 
 
 
 
 

Leave a Reply