ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಸರ್ಕಾರಿ ಭರವಸೆಗಳ ಸಮಿತಿ ಸಭೆ

ಬೆಂಗಳೂರು : ಸರ್ಕಾರಿ ಭರವಸೆಗಳ ಸಮಿತಿ ಸಭೆ ಇಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ಸಮಿತಿ ಅಧ್ಯಕ್ಷ ಶ್ರೀ ಕೆ. ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು.

ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಕೆಎಸ್ ಕೃಷ್ಣಾರೆಡ್ಡಿ, ಮುಖ್ಯ ಯೋಜನಾಧಿಕಾರಿ ಬಿ. ಗುರುಪ್ರಸಾದ್, ಲೋಕೋಪಯೋಗಿ ಇಲಾಖೆ ಬೆಂಗಳೂರಿನ 

ಮುಖ್ಯ ಇಂಜಿನಿಯರ್ ಶಿವಯೋಗಿ ಹಿರೇಮಠ, ಆರ್. ಡಿ. ಸಿ. ಎಲ್.ನ ವ್ಯವಸ್ಥಾಪಕ ನಿರ್ದೇಶಕ ಪಿ. ಆರ್. ಶಿವಪ್ರಸಾದ್, ರಾಜ್ಯ ಹೆದ್ದಾರಿ ಅಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ಕೆ. ವೀರಭದ್ರಯ್ಯ ಬಿ.ಆರ್, ಲೋಕೋಪಯೋಗಿ ಇಲಾಖೆ ಶಿವಮೊಗ್ಗದ ಮುಖ್ಯ ಇಂಜಿನಿಯರ್ ಬಿ. ಟಿ. ಕಾಂತರಾಜ್ ಹಾಗೂ ಮತ್ತಿತರರು ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply