ಬೆಂಗಳೂರು: ಇಂದು ಕರ್ನಾಟಕದ ರಾಜ್ಯಪಾಲರಾಗಿ ಮಾಜಿ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೂಟ್ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕಳೆದ ವಾರ ರಾಷ್ಟ್ರಪತಿಗಳು ಥಾವರ್ ಚಂದ್ ಗೆಹ್ಲೋಟ್ ರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಕ ಮಾಡಿದ್ದರು. ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ, ಥಾವರ್ ಚಂದ್ ಗೆಹ್ಲೋಟ್ಗೆ ಆಡಳಿತ ಮತ್ತು ಗೌಪ್ಯತೆಯ ಪ್ರಮಾಣ ವಚನವನ್ನು ಬೋಧಿಸಿದರು.
ನಿರ್ಗಮಿತ ರಾಜ್ಯಪಾಲ ವಹುಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.